ಉಡುಪಿ: ರೈತರು ತಾವು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.
ಒಂದೆಡೆ ತಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇನ್ನೊಂದೆಡೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಪರ್ಯಾಯ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಮಂಗ, ಜಿಂಕೆ, ಕಾಡುಹಂದಿ, ನವಿಲು ಮತ್ತು ಕಾಡೆಮ್ಮೆಗಳು ಕೃಷಿ ಭೂಮಿಗಳಿಗೆ ದಾಳಿ ನಡೆಸಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳನ್ನು ನಾಶ ಮಾಡುತ್ತಿವೆ. ಕೃಷಿಕರು ಮಂಗಗಳನ್ನು ಭಯಭೀತಗೊಳಿಸಿ ಓಡಿಸಲು ಪರವಾನಿಗೆ ಪಡೆದ ಬಂದೂಕುಗಳನ್ನು ಬಳಸುತ್ತಿದ್ದಾರೆ. ಅದೇ ರೀತಿ ಪ್ರಾಣಿಗಳನ್ನು ಓಡಿಸಲು ಪಟಾಕಿಗಳನ್ನು ಕೂಡ ಬಳಸುತ್ತಿದ್ದಾರೆ. ಆದರೆ, ಇವೆಲ್ಲವೂ ತಾತ್ಕಾಲಿಕ ಪರಿಹಾರಗಳಾಗಿವೆ.
ಯಾವುದೇ ತೊಂದರೆ ಇಲ್ಲದೆ ಪ್ರಾಣಿಗಳನ್ನು ಓಡಿಸಲು ಬಳಸುವ ವಿವಿಧ ತಂತ್ರಗಳು ಹಾಗೂ ಮಾರ್ಗಗಳು ಇದೀಗ ಹಳೆಯದಾಗುತ್ತಿವೆ ಎನ್ನುತ್ತಾರೆ ಕೃಷಿಕರು.
ಉಡುಪಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು ಕೃಷಿ ಮತ್ತು ಜನರ ಮೇಲೆ ದಾಳಿ ನಡೆಸಿದ ಪರಿಣಾಮ ಅಪಾರ ನಷ್ಟಗಳು ಸಂಭವಿಸಿವೆ. ಇದರ ಪರಿಹಾರಕ್ಕಾಗಿ ಮಂಕಿ ಪಾರ್ಕ್ ನಿರ್ಮಾಣ ಮಾಡುವ ಪ್ರಸ್ತಾಪ ಇದೆಯಾದರೂ ಸರ್ಕಾರ ಇತ್ತ ಕಡೆ ಗಮನ ಹರಿಸುತ್ತಿಲ್ಲ. ಇನ್ನು ಮುಂದೆಯಾದರೂ ಜನಪ್ರತಿನಿಧಿಗಳು ಇತ್ತ ಕಡೆ ಗಮನ ಹರಿಸಿ ಕೃಷಿಕರ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಕೃಷಿಕರು ಆಗ್ರಹಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…