ಉಡುಪಿ: ರೈತರು ತಾವು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.
ಒಂದೆಡೆ ತಾವು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಇನ್ನೊಂದೆಡೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಪರ್ಯಾಯ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಮಂಗ, ಜಿಂಕೆ, ಕಾಡುಹಂದಿ, ನವಿಲು ಮತ್ತು ಕಾಡೆಮ್ಮೆಗಳು ಕೃಷಿ ಭೂಮಿಗಳಿಗೆ ದಾಳಿ ನಡೆಸಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳನ್ನು ನಾಶ ಮಾಡುತ್ತಿವೆ. ಕೃಷಿಕರು ಮಂಗಗಳನ್ನು ಭಯಭೀತಗೊಳಿಸಿ ಓಡಿಸಲು ಪರವಾನಿಗೆ ಪಡೆದ ಬಂದೂಕುಗಳನ್ನು ಬಳಸುತ್ತಿದ್ದಾರೆ. ಅದೇ ರೀತಿ ಪ್ರಾಣಿಗಳನ್ನು ಓಡಿಸಲು ಪಟಾಕಿಗಳನ್ನು ಕೂಡ ಬಳಸುತ್ತಿದ್ದಾರೆ. ಆದರೆ, ಇವೆಲ್ಲವೂ ತಾತ್ಕಾಲಿಕ ಪರಿಹಾರಗಳಾಗಿವೆ.
ಯಾವುದೇ ತೊಂದರೆ ಇಲ್ಲದೆ ಪ್ರಾಣಿಗಳನ್ನು ಓಡಿಸಲು ಬಳಸುವ ವಿವಿಧ ತಂತ್ರಗಳು ಹಾಗೂ ಮಾರ್ಗಗಳು ಇದೀಗ ಹಳೆಯದಾಗುತ್ತಿವೆ ಎನ್ನುತ್ತಾರೆ ಕೃಷಿಕರು.
ಉಡುಪಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು ಕೃಷಿ ಮತ್ತು ಜನರ ಮೇಲೆ ದಾಳಿ ನಡೆಸಿದ ಪರಿಣಾಮ ಅಪಾರ ನಷ್ಟಗಳು ಸಂಭವಿಸಿವೆ. ಇದರ ಪರಿಹಾರಕ್ಕಾಗಿ ಮಂಕಿ ಪಾರ್ಕ್ ನಿರ್ಮಾಣ ಮಾಡುವ ಪ್ರಸ್ತಾಪ ಇದೆಯಾದರೂ ಸರ್ಕಾರ ಇತ್ತ ಕಡೆ ಗಮನ ಹರಿಸುತ್ತಿಲ್ಲ. ಇನ್ನು ಮುಂದೆಯಾದರೂ ಜನಪ್ರತಿನಿಧಿಗಳು ಇತ್ತ ಕಡೆ ಗಮನ ಹರಿಸಿ ಕೃಷಿಕರ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಕೃಷಿಕರು ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…