ಇತರೆ

“ಗೀತಕ್ಕ ಗೆದ್ದರೆ ನಾರಾಯಣಗುರು ವಿಚಾರ ಧಾರೆಗಳು ಗೆದ್ದಂತೆ” ಚಿಂತಕ ನಿಖೇತ್ ರಾಜ್ ಮೌರ್ಯ

ಉಡುಪಿ: ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿಂತಕರೂ ಆದ ನಿಖೇತ್ ರಾಜ್ ಮೌರ್ಯ ಹೇಳಿದರು.

ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರದಲ್ಲಿ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಸಾತಯಾಚನೆ ಸಭೆ ಹಾಗೂ ಮಹಿಳಾ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಲ್ಲಿ ಬಸವಣ್ಣ ಹಾಗೂ ಕುವೆಂಪುರವರ ತತ್ವ ಸಿದ್ಧಾಂತಗಳನ್ನು ಜಾಗೃತಗೊಳಿಸಬೇಕಿದೆ. ಅದ್ದರಿಂದ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಕೋರಿದರು.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಶಿಕಾರಿಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಡಿಕೆ ಬೆಳೆಗಾರರು ಇದ್ದಾರೆ. ಆದರೆ, ಈ ರೈತರಿಗೆ ನ್ಯಾಯ ಒದಗಿಸಿಕೊಡಲು ಬಿಜೆಪಿ ಸರ್ಕಾರದಿಂದ ಆಗಿಲ್ಲ. ಇಲ್ಲಿ, ವಿದೇಶದಿಂದ ಅಡಿಕೆ ಆಮದಿಗೆ ಬಿಜೆಪಿ ಮುಂದಾಗಿದೆ. ಬೂತಾನ್ ಅಡಿಕೆಗೆ ಮಣೆ ಹಾಕಲಾಗಿದೆ. ಇದರಿಂದ, ರೈತರ ಅಡಿಕೆ ತೋಟಗಳು ಅವನತಿಯ ಹಂತ ತಲುಪಲಿವೆ ಎಂದರು.
ದೇಶದಲ್ಲಿ ಬಿಜೆಪಿ 400 ಸ್ಥಾನ ಪಡೆದರೆ, ಸಂವಿಧಾನ ತಿದ್ದುಪಡಿ ಮಾಡುವುದಾಗಿ ಹೇಳುತ್ತಿದ್ದಾರೆ. ನೆನಪಿರಲಿ, ಇದೇ ಸಂವಿಧಾನದಿಂದ ಬಡವರ ಮಕ್ಕಳು, ಕೂಲಿಕಾರ್ಮಿಕರ ಮಕ್ಕಳು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಅವಕಾಶ ಕಲ್ಪಿಸಿರುವುದು. ಆದರೆ, ಬಿಜೆಪಿಯವರು ಇಂತಹ ಸಂವಿಧಾನವನ್ನು ಅಳಿಸಲು ಮುಂದಾಗಿದ್ದಾರೆ. ಇದಕ್ಕೆ ಅವಕಾಶ ಕಲ್ಪಿಸಿಕೊಡಕೂಡದು ಎಂದು ಹೇಳಿದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನ ಸಾಮಾನ್ಯರ ಅಳಲು ಆಲಿಸಲು ಸರ್ಕಾರದ ವ್ಯವಸ್ಥೆ ಇರುವುದು. ಆದರೆ, ಕೇಂದ್ರದಲ್ಲಿ ಬಿಜೆಪಿ ಆಡಳಿತ ಬಂದಾಗಿನಿಂದ ಜಾತಿ- ಧರ್ಮಗಳ ನಡುವೆ ಬಿರುಕು ಮೂಡಿಸುತ್ತಿದೆ. ಸಮುದಾಯಗಳ ನಡುವೆ ಭೇದ- ಬಾವ ಮೂಡಿಸಿ, ಮಾನವ ಹಕ್ಕಿಗೆ ಧಕ್ಕೆ ಉಂಟು ಮಾಡಲಾಗುತ್ತಿದೆ ಎಂದರು.
ಕೆಳಗೆ ಬಿದ್ದವರನ್ನು ಕೈ ಹಿಡಿದು ಮೇಲೆತ್ತುವ ಕಾರ್ಯ ಆಗಬೇಕು. ಇದು ನಿಜವಾದ ಭಾರತದ ಕಲ್ಪನೆ. ಆದರೆ, ಪ್ರಸ್ತುತ ಬಿಜೆಪಿ ಆಡಳಿತದಿಂದ ಕೆಳಗೆ ಬಿದ್ದವರು ಹಿಂದು, ಮುಸ್ಲಿಂ, ಕ್ರೈಸ್ತ ಸಮುದಾಯವರ ಎಂದು ನೋಡಲಾಗುತ್ತಿದೆ‌. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಲ್ಲದು ಎಂದರು.
ಮತದಾನದ ದಿನ ನೆನಪಾಗಬೇಕಿರುವುದು ದೇಶದಲ್ಲಿ ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಸೇರಿದಂತೆ ಮೂಲ ಸೌಕರ್ಯಗಳನ್ನು ಬಿಜೆಪಿ ಆಡಳಿತದಲ್ಲಿ ಕಲ್ಪಿಸದೇ ಇರುವುದು. ಪ್ರಸ್ತುತ ಬಡವರು ಮನೆ ಕಟ್ಟಲು ಬಳಸುವ ಇಟ್ಟಿಗೆ, ಸಿಮೆಂಟ್ ಖರೀದಿಸಲು ಕೂಡ ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿಗೆ ಬಿಜೆಪಿ ಅಡಳಿತ ದೇಶವನ್ನು ತಂದಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೀನು ತಿನ್ನುವ ನಾಯಕರಿಗೆ ಮತ ನೀಡಬೇಡಿ ಎಂದು ಹೇಳಿಕೆ ನೀಡಿದ್ದಾರೆ. ಇದು ಮೀನುಗಾರಿಕೆಯನ್ನೇ ನಂಬಿಕೊಂಡ ಕುಟುಂಬಗಳಿಗೆ ಮಾಡುತ್ತಿರುವ ಅಪಮಾನ. ಇಲ್ಲಿ ಮೀನುಗಾರರ ಅಸ್ತಿತ್ವ ರೂಪಿಸಬೇಕಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಬೇಕು. ಗೀತಕ್ಕಗೆ ಮತ ನೀಡಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಮಾತನಾಡಿ, ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಹೆಣ್ಣುಮಕ್ಕಳಿಗೆ ಸಮಾನತೆ ದೊರಕಿಸಿಕೊಡಲು ಸಾಧ್ಯ. ಬೆಲೆ ಏರಿಕೆಯ ಪರಿಸ್ಥಿತಿ ನಿಭಾಯಿಸಲು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರಬೇಕಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರವನ್ನು ಜನ ಸಾಮಾನ್ಯರು ನಂಬಕೂಡದು. ಕ್ಷೇತ್ರದ ರಕ್ಷಣೆಗೆ ನನಗೆ ಮತ ನೀಡಿ ಎಂದು ಕೋರಿದರು.
ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ಬಿ.ಎಂ.ಸುಕುಮಾರ್ ಶೆಟ್ಟಿ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಡಿ.ಆರ್.ರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜು ಪೂಜಾರಿ, ಬೈಂದೂರು ಚುನಾವಣೆ ಉಸ್ತುವಾರಿ ಜಿ.ಎ.ಭಾವ, ಪ್ರಮುಖರಾದ ಮಹಿಳಾ ಅಧ್ಯಕ್ಷ ಗೌರಿ ದೇವಾಡಿಗ, ಇಂದಿರಾ, ಅರವಿಂದ ಪೂಜಾರಿ,ಮದನ್ ಕುಮಾರ್, ಚಂದ್ರ ಪೂಜಾರಿ, ಶಂಕರ್ ಪೂಜಾರಿ, ಉದಯ ಕುಮಾರ್ ಶೆಟ್ಟಿ ಸೇರಿ ಕಾರ್ಯಕರ್ತರು ಇದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…

2 hours ago

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago