ಉಡುಪಿ: ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದೆ.
ಬಿಸಿಲ ಧಗೆ ಪ್ರತಿದಿನ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಹಸುಗಳು ಸಹಜವಾಗಿಯೇ ಸಂಕಟ ಪಡುತ್ತವೆ. ಹಾಗಾಗಿ ಉಡುಪಿಯ ರಘುನಂದನ್ ಹೆಬ್ಬಾರ್ ನೇತೃತ್ವದ ಯುಗಾದಿ ಗೋಪಾರ್ಟಿ ತಂಡದವರು, ಕಲ್ಲಂಗಡಿ ತಿನ್ನಿಸುವ ಮಹತ್ವದ ನಿರ್ಧಾರ ಕೈಗೊಂಡರು. ಕಾರ್ಯಕರ್ತರಲ್ಲಾ ಸೇರಿ ಗೋ ಶಾಲೆಗೆ ಭೇಟಿ ಕೊಟ್ಟು ಕಲ್ಲಂಗಡಿಯನ್ನು ತುಂಡು ಮಾಡಿ ತಾವೇ ಸ್ವತಃ ಗೋವುಗಳಿಗೆ ತಿನ್ನಿಸಿ ಸಂಭ್ರಮಿಸಿದರು.
ಈ ತಂಡ ಗೋ ಸೇವೆಯಲ್ಲಿ ನಿರತವಾಗಿದ್ದು ಪ್ರತಿ ವರ್ಷ ವಿವಿಧ ಗೋಶಾಲೆಗಳಿಗೆ ಭೇಟಿ ನೀಡಿ ಈ ರೀತಿ ಗೋಸೇವೆ ನಡೆಸುತ್ತಾ ಬಂದಿದೆ. ನೀಲಾವರ ಗೋಶಾಲೆಯು ಸೇರಿದಂತೆ ಕರಾವಳಿ ಪರಿಸರದ ಅನೇಕ ಗೋಶಾಲೆಗಳಲ್ಲಿ ಸೇವಾ ಕಾರ್ಯ ನಡೆಸಿದೆ. ಪ್ರತಿಯೊಬ್ಬರೂ ತಮ್ಮ ಆದಾಯದ ಒಂದು ಪುಟ್ಟ ಭಾಗವನ್ನು ತಮ್ಮ ಊರಿನ ಗೋವುಗಳ ಸೇವೆಗೆ ಬಳಸಬೇಕು ಎಂಬುವುದು ಈ ತಂಡದ ಆಶಯವಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…