ಉಡುಪಿ: ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದೆ.
ಬಿಸಿಲ ಧಗೆ ಪ್ರತಿದಿನ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಹಸುಗಳು ಸಹಜವಾಗಿಯೇ ಸಂಕಟ ಪಡುತ್ತವೆ. ಹಾಗಾಗಿ ಉಡುಪಿಯ ರಘುನಂದನ್ ಹೆಬ್ಬಾರ್ ನೇತೃತ್ವದ ಯುಗಾದಿ ಗೋಪಾರ್ಟಿ ತಂಡದವರು, ಕಲ್ಲಂಗಡಿ ತಿನ್ನಿಸುವ ಮಹತ್ವದ ನಿರ್ಧಾರ ಕೈಗೊಂಡರು. ಕಾರ್ಯಕರ್ತರಲ್ಲಾ ಸೇರಿ ಗೋ ಶಾಲೆಗೆ ಭೇಟಿ ಕೊಟ್ಟು ಕಲ್ಲಂಗಡಿಯನ್ನು ತುಂಡು ಮಾಡಿ ತಾವೇ ಸ್ವತಃ ಗೋವುಗಳಿಗೆ ತಿನ್ನಿಸಿ ಸಂಭ್ರಮಿಸಿದರು.
ಈ ತಂಡ ಗೋ ಸೇವೆಯಲ್ಲಿ ನಿರತವಾಗಿದ್ದು ಪ್ರತಿ ವರ್ಷ ವಿವಿಧ ಗೋಶಾಲೆಗಳಿಗೆ ಭೇಟಿ ನೀಡಿ ಈ ರೀತಿ ಗೋಸೇವೆ ನಡೆಸುತ್ತಾ ಬಂದಿದೆ. ನೀಲಾವರ ಗೋಶಾಲೆಯು ಸೇರಿದಂತೆ ಕರಾವಳಿ ಪರಿಸರದ ಅನೇಕ ಗೋಶಾಲೆಗಳಲ್ಲಿ ಸೇವಾ ಕಾರ್ಯ ನಡೆಸಿದೆ. ಪ್ರತಿಯೊಬ್ಬರೂ ತಮ್ಮ ಆದಾಯದ ಒಂದು ಪುಟ್ಟ ಭಾಗವನ್ನು ತಮ್ಮ ಊರಿನ ಗೋವುಗಳ ಸೇವೆಗೆ ಬಳಸಬೇಕು ಎಂಬುವುದು ಈ ತಂಡದ ಆಶಯವಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…