ಉಡುಪಿ: ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದೆ.
ಬಿಸಿಲ ಧಗೆ ಪ್ರತಿದಿನ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಹಸುಗಳು ಸಹಜವಾಗಿಯೇ ಸಂಕಟ ಪಡುತ್ತವೆ. ಹಾಗಾಗಿ ಉಡುಪಿಯ ರಘುನಂದನ್ ಹೆಬ್ಬಾರ್ ನೇತೃತ್ವದ ಯುಗಾದಿ ಗೋಪಾರ್ಟಿ ತಂಡದವರು, ಕಲ್ಲಂಗಡಿ ತಿನ್ನಿಸುವ ಮಹತ್ವದ ನಿರ್ಧಾರ ಕೈಗೊಂಡರು. ಕಾರ್ಯಕರ್ತರಲ್ಲಾ ಸೇರಿ ಗೋ ಶಾಲೆಗೆ ಭೇಟಿ ಕೊಟ್ಟು ಕಲ್ಲಂಗಡಿಯನ್ನು ತುಂಡು ಮಾಡಿ ತಾವೇ ಸ್ವತಃ ಗೋವುಗಳಿಗೆ ತಿನ್ನಿಸಿ ಸಂಭ್ರಮಿಸಿದರು.
ಈ ತಂಡ ಗೋ ಸೇವೆಯಲ್ಲಿ ನಿರತವಾಗಿದ್ದು ಪ್ರತಿ ವರ್ಷ ವಿವಿಧ ಗೋಶಾಲೆಗಳಿಗೆ ಭೇಟಿ ನೀಡಿ ಈ ರೀತಿ ಗೋಸೇವೆ ನಡೆಸುತ್ತಾ ಬಂದಿದೆ. ನೀಲಾವರ ಗೋಶಾಲೆಯು ಸೇರಿದಂತೆ ಕರಾವಳಿ ಪರಿಸರದ ಅನೇಕ ಗೋಶಾಲೆಗಳಲ್ಲಿ ಸೇವಾ ಕಾರ್ಯ ನಡೆಸಿದೆ. ಪ್ರತಿಯೊಬ್ಬರೂ ತಮ್ಮ ಆದಾಯದ ಒಂದು ಪುಟ್ಟ ಭಾಗವನ್ನು ತಮ್ಮ ಊರಿನ ಗೋವುಗಳ ಸೇವೆಗೆ ಬಳಸಬೇಕು ಎಂಬುವುದು ಈ ತಂಡದ ಆಶಯವಾಗಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…