ಜನ ಮನದ ನಾಡಿ ಮಿಡಿತ

Advertisement

ಮೇ.3ರಂದು `ಗಬ್ಬರ್ ಸಿಂಗ್’ ತುಳು ಸಿನಿಮಾ ಬಿಡುಗಡೆ

ಪುತ್ತೂರು: ಮುತ್ತುಗೋಪಾಲ ಫಿಲ್ಮ್ ನಿರ್ಮಾಣದಲ್ಲಿ ಸುಮಾರು ೧.೭೦ ಕೋಟಿ ಬಜೆಟ್‌ನಲ್ಲಿ ತಯಾರಿಸಲಾದ `ಗಬ್ಬರ್ ಸಿಂಗ್’ ತುಳು ಸಿನಿಮಾ ಮಾ. ೩ರಂದು ತೆರೆಕಾಣಲಿದೆ ಎಂದು ಸಿನಿಮಾದ ನಟ ಚಂದ್ರಹಾಸ ಶೆಟ್ಟಿ ಮಾಣಿ ತಿಳಿಸಿದ್ದಾರೆ.

ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಚಂದ್ರಶೇಖರ ಸನಿಲ್ ಮತ್ತು ನಾಗೇಶ್ ಪೂಜಾರಿ ಅರ್ಪಿಸುವ ಗಬ್ಬರ್ ಸಿಂಗ್ ಸಿನಿಮಾದಲ್ಲಿ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕರಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದೀಪ್ ನಿರ್ದೇಶನದಲ್ಲಿ, ಪುಷ್ಪರಾಜ್ ಮತ್ತು ಜಯರಾಜ್ ಸಹನಿರ್ದೇಶನದಲ್ಲಿ ಸಿನಿಮಾ ತಯಾರಾಗಿದ್ದು, ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ.
ಶರಣ್ ಶೆಟ್ಟಿ ನಾಯಕ, ವೆನ್ಸಿಟಾ ಡಯಾಸ್ ನಾಯಕಿಯಾಗಿ ಅಭಿನಯಿಸಿದ್ದು, ಮುಖ್ಯ ಭೂಮಿಕೆಯಲ್ಲಿ ಹಾಸ್ಯ ನಟರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೊಜರಾಜ್ ವಾಮಂಜೂರು, ರವೀ ರಾಮಕುಂಜ ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯ ಮಂಗಳೂರು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಂದೂರು ಮತ್ತಿತರ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.
ಮೇ. ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಸುದ್ಧಿಗೋಷ್ಠಿಯಲ್ಲಿ ಗಬ್ಬರ್‌ಸಿಂಗ್ ಸಿನಿಮಾದ ನಾಯಕ ನಟ ಶರಣ್ ಶೆಟ್ಟಿ, ನಾಯಕಿ ನಟಿ ವೆನ್ಸಿಟಾ ಡಯಾಸ್ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!