ಜನ ಮನದ ನಾಡಿ ಮಿಡಿತ

Advertisement

ಮೇ.3ರಂದು `ಗಬ್ಬರ್ ಸಿಂಗ್’ ತುಳು ಸಿನಿಮಾ ಬಿಡುಗಡೆ

ಪುತ್ತೂರು: ಮುತ್ತುಗೋಪಾಲ ಫಿಲ್ಮ್ ನಿರ್ಮಾಣದಲ್ಲಿ ಸುಮಾರು ೧.೭೦ ಕೋಟಿ ಬಜೆಟ್‌ನಲ್ಲಿ ತಯಾರಿಸಲಾದ `ಗಬ್ಬರ್ ಸಿಂಗ್’ ತುಳು ಸಿನಿಮಾ ಮಾ. ೩ರಂದು ತೆರೆಕಾಣಲಿದೆ ಎಂದು ಸಿನಿಮಾದ ನಟ ಚಂದ್ರಹಾಸ ಶೆಟ್ಟಿ ಮಾಣಿ ತಿಳಿಸಿದ್ದಾರೆ.

ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಚಂದ್ರಶೇಖರ ಸನಿಲ್ ಮತ್ತು ನಾಗೇಶ್ ಪೂಜಾರಿ ಅರ್ಪಿಸುವ ಗಬ್ಬರ್ ಸಿಂಗ್ ಸಿನಿಮಾದಲ್ಲಿ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕರಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದೀಪ್ ನಿರ್ದೇಶನದಲ್ಲಿ, ಪುಷ್ಪರಾಜ್ ಮತ್ತು ಜಯರಾಜ್ ಸಹನಿರ್ದೇಶನದಲ್ಲಿ ಸಿನಿಮಾ ತಯಾರಾಗಿದ್ದು, ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ.
ಶರಣ್ ಶೆಟ್ಟಿ ನಾಯಕ, ವೆನ್ಸಿಟಾ ಡಯಾಸ್ ನಾಯಕಿಯಾಗಿ ಅಭಿನಯಿಸಿದ್ದು, ಮುಖ್ಯ ಭೂಮಿಕೆಯಲ್ಲಿ ಹಾಸ್ಯ ನಟರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೊಜರಾಜ್ ವಾಮಂಜೂರು, ರವೀ ರಾಮಕುಂಜ ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯ ಮಂಗಳೂರು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಂದೂರು ಮತ್ತಿತರ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.
ಮೇ. ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಸುದ್ಧಿಗೋಷ್ಠಿಯಲ್ಲಿ ಗಬ್ಬರ್‌ಸಿಂಗ್ ಸಿನಿಮಾದ ನಾಯಕ ನಟ ಶರಣ್ ಶೆಟ್ಟಿ, ನಾಯಕಿ ನಟಿ ವೆನ್ಸಿಟಾ ಡಯಾಸ್ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!