ಪುತ್ತೂರು: ಮುತ್ತುಗೋಪಾಲ ಫಿಲ್ಮ್ ನಿರ್ಮಾಣದಲ್ಲಿ ಸುಮಾರು ೧.೭೦ ಕೋಟಿ ಬಜೆಟ್ನಲ್ಲಿ ತಯಾರಿಸಲಾದ `ಗಬ್ಬರ್ ಸಿಂಗ್’ ತುಳು ಸಿನಿಮಾ ಮಾ. ೩ರಂದು ತೆರೆಕಾಣಲಿದೆ ಎಂದು ಸಿನಿಮಾದ ನಟ ಚಂದ್ರಹಾಸ ಶೆಟ್ಟಿ ಮಾಣಿ ತಿಳಿಸಿದ್ದಾರೆ.
ಅವರು ಬುಧವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಚಂದ್ರಶೇಖರ ಸನಿಲ್ ಮತ್ತು ನಾಗೇಶ್ ಪೂಜಾರಿ ಅರ್ಪಿಸುವ ಗಬ್ಬರ್ ಸಿಂಗ್ ಸಿನಿಮಾದಲ್ಲಿ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕರಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದೀಪ್ ನಿರ್ದೇಶನದಲ್ಲಿ, ಪುಷ್ಪರಾಜ್ ಮತ್ತು ಜಯರಾಜ್ ಸಹನಿರ್ದೇಶನದಲ್ಲಿ ಸಿನಿಮಾ ತಯಾರಾಗಿದ್ದು, ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ.
ಶರಣ್ ಶೆಟ್ಟಿ ನಾಯಕ, ವೆನ್ಸಿಟಾ ಡಯಾಸ್ ನಾಯಕಿಯಾಗಿ ಅಭಿನಯಿಸಿದ್ದು, ಮುಖ್ಯ ಭೂಮಿಕೆಯಲ್ಲಿ ಹಾಸ್ಯ ನಟರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೊಜರಾಜ್ ವಾಮಂಜೂರು, ರವೀ ರಾಮಕುಂಜ ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯ ಮಂಗಳೂರು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಂದೂರು ಮತ್ತಿತರ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.
ಮೇ. ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಗಬ್ಬರ್ಸಿಂಗ್ ಸಿನಿಮಾದ ನಾಯಕ ನಟ ಶರಣ್ ಶೆಟ್ಟಿ, ನಾಯಕಿ ನಟಿ ವೆನ್ಸಿಟಾ ಡಯಾಸ್ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…