ಜನ ಮನದ ನಾಡಿ ಮಿಡಿತ

Advertisement

ಹಾರಾಡಿಗೆ ಸಂಪರ್ಕಿಸುವ ರಸ್ತೆಯ ರೈಲ್ವೇ ಮೇಲ್ಸೇತುವೆ ವಿಸ್ತರಣೆ

ಪುತ್ತೂರು: ನೆಹರೂನಗರದಿಂದ ವಿವೇಕಾನಂದ ಕಾಲೇಜು ಕ್ಯಾಂಪಸ್ ಮೂಲಕ ಹಾರಾಡಿಗೆ ಸಂಪರ್ಕಿಸುವ ರಸ್ತೆಯ ರೈಲ್ವೇ ಮೇಲ್ಸೇತುವೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ರೂ. ೫.೩೫ ಕೋಟಿ ವೆಚ್ಚದಲ್ಲಿ ನಡೆದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಸಂಜೆ ಅಧಿಕೃತವಾಗಿ ಸಂಚಾರಕ್ಕೆ ಚಾಲನೆ ನೀಡಿದರು.

ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ನಳಿನ್ ಕುಮಾರ್ ಮಾಧ್ಯಮಗಳ ಜತೆ ಮಾತನಾಡಿ, ಮೇಲ್ಸೇತುವೆ ಅಗಲಗೊಳಿಸಬೇಕೆಂಬುದು ಬಹು ಸಮಯಗಳ ಬೇಡಿಕೆಯಾಗಿತ್ತು. ದಿನಂಪ್ರತಿ ಸಾವಿರಾರು ವಿದ್ಯಾರ್ಥಿಗಳು ಸಂಚರಿಸುವ ಸೇತುವೆಯನ್ನು ಅಭಿವೃದ್ಧಿಪಡಿಸಬೇಕೆಂದು ವಿವೇಕಾನಂದ ವಿದ್ಯಾಸಂಸ್ಥೆಯಿAದಲೂ ಮನವಿ ಸಲ್ಲಿಸಲಾಗಿತ್ತು. ಬೇಡಿಕೆಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಪುತ್ತೂರು, ಉಪ್ಪಿನಂಗಡಿಗೆ ಬೈಪಾಸ್, ವರ್ತುಲ ರಸ್ತೆಯಾಗಿಯೂ ಬಳಕೆಯಾಗುವ ಉದ್ದೇಶದಿಂದ ಇದು ಆದ್ಯತೆಯ ಅಭಿವೃದ್ಧಿ ವಿಚಾರವಾಗಿತ್ತು. ಬಳಿಕದಲ್ಲಿ ರೈಲ್ವೇ ನಿಯಮಾವಳಿ ೫೦:೫೦ರ ಅನುಪಾತದ ಅನುದಾನ ನೀಡುವ ಕುರಿತ ಚರ್ಚೆಯೂ ಇತ್ತು. ಆದರೆ ಕೊನೆಗೆ ಸಂಪೂರ್ಣ ಅನುದಾನವನ್ನೂ ಕೇಂದ್ರ ರೈಲ್ವೇ ಇಲಾಖೆಯೇ ನೀಡಿದೆ. ಸ್ಥಳೀಯಾಡಳಿತದ ವ್ಯಾಪ್ತಿಯಲ್ಲಿದ್ದರೂ ಸಂಪೂರ್ಣ ಅನುದಾನವನ್ನು ರೈಲ್ವೇ ಇಲಾಖೆಯೇ ನೀಡುವುದು ದೇಶದಲ್ಲೇ ಪ್ರಥಮ ಎಂದು ನಳಿನ್ ಹೇಳಿದರು.
ಹಲವು ರೀತಿಯ ಅಡೆತಡೆಗಳಿದ್ದರೂ ೫ ತಿಂಗಳ ಸೀಮಿತ ಅವಧಿಯಲ್ಲಿ ಮೇಲ್ಸೇತುವೆ, ರಸ್ತೆಯೂ ಅಭಿವೃದ್ಧಿಗೊಂಡಿದ್ದು, ಸಂಚಾರಕ್ಕೆ ಮುಕ್ತಗೊಂಡಿದೆ. ಸೀಮಿತ ಅವಧಿಯಲ್ಲಿ ಕೆಲಸ ನಿರ್ವಹಿಸಿದ ಗುತ್ತಿಗೆದಾರರಿಗೂ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ ನಳಿನ್, ರೈಲ್ವೇಗೆ ಸಂಬAಧಿಸಿದ ಪುತ್ತೂರಿನ ಎಲ್ಲಾ ಬೇಡಿಕೆಗಳು ಈಡೇರಿವೆ. ಎಪಿಎಂಸಿ ರೈಲ್ವೇ ಅಂಡರ್ ಪಾಸ್, ಹಾರಾಡಿ ರೈಲ್ವೇ ಸಂಪರ್ಕ ರಸ್ತೆ, ವಿವೇಕಾನಂದ ಮೇಲ್ಸೇತುವೆಯ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭಾ ಮಾಜಿ ಅಧ್ಯಕ್ಷ ಕೆ.ಜೀವಂಧರ್ ಜೈನ್, ಮಾಜಿ ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ವಿವೇಕಾನಂದ ವಿದ್ಯಾಸಂಸ್ಥೆಗಳಿಗೆ ಸಂಬAಧಪಟ್ಟ ಪ್ರಮುಖರಾದ ಅಚ್ಯುತ್ ನಾಯಕ್, ಇ. ಶಿವಪ್ರಸಾದ್, ಸಂತೋಷ್ ಬೊನಂತಾಯ, ರವಿ ನಾರಾಯಣ, ಶ್ರೀಪತಿ ಕಲ್ಲುರಾಯ, ರೂಪಲೇಖಾ, ವಿಷ್ಣು ಗಣಪತಿ ಭಟ್, ಮುರಳಿಕೃಷ್ಣ ಚಳ್ಳಂಗಾರು, ಪ್ರಮುಖರಾದ ಅಜಿತ್ ರೈ ಹೊಸಮನೆ, ಡಾ. ಸುಧಾ ರಾವ್, ಭಾಮಿ ಅಶೋಕ್ ಶೆಣೈ,ವಿಶ್ವನಾಥ ಗೌಡ, ಶಿವಕುಮಾರ್, ವಿನಯ ಕಲ್ಲೇಗ, ದಿನೇಶ್ ಜೈನ್, ಮುರಳಿಕೃಷ್ಣ ಹಸಂತಡ್ಕ, ಶ್ರೀಧರ್ ತೆಂಕಿಲ, ಸೀತಾರಾಮ ರೈ ಕೆದಂಬಾಡಿಗುತ್ತು, ರಾಜೇಶ್ ಬನ್ನೂರು ಸೇರಿದಂತೆ ಸ್ಥಳೀಯರು, ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!