ಜನ ಮನದ ನಾಡಿ ಮಿಡಿತ

Advertisement

ಕಬಕದಲ್ಲಿ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು!

ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ.

ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು.
ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ರೋಗಿಯ ಕಡೆಯವರನ್ನು ಪರ್ಯಾಯ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು.
ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನ ಆ್ಯಂಬುಲೆನ್ಸ್ ಎಂದು ಗುರುತಿಸಲಾಗಿದ್ದು, ಮಂಗಳೂರಿಗೆ ರೋಗಿಯೋರ್ವರನ್ನು ಕೊಂಡೊಯ್ಯಲಾಗುತ್ತಿತ್ತು. ಆ್ಯಂಬುಲೆನ್ಸ್ ಗೆ ಕಬಕದ ಶಾಲಾ ರಸ್ತೆಯಿಂದ ನೇರವಾಗಿ ಮುಖ್ಯರಸ್ತೆಗೆ ಬಂದ ನ್ಯಾನೊ ಡಿಕ್ಕಿಯಾಗಿದೆ. ಇದೇ ಸಂದರ್ಭ ಮಂಗಳೂರು ಕಡೆಯಿಂದ ಬಂದ ಮತ್ತೊಂದು ಕಾರು ನ್ಯಾನೋಗೆ ಅಪ್ಪಳಿಸಿದೆ ಎಂದು ತಿಳಿದುಬಂದಿದೆ.
ಸಂಚಾರಿ ಠಾಣೆ ಪೋಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!