ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ಬಜೆಟ್ 2023: ನಾಳೆ ಬಜೆಟ್‌- ಬೆಳಗಾವಿ ರೈತರ ಬೇಡಿಕೆ ಈಡೇರಿಸುತ್ತಾ ಸರ್ಕಾರ?

ಬೆಳಗಾವಿ: ಐದು ಗ್ಯಾರಂಟಿ‌ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ.

ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ.

ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ ಈ ಹಿಂದೆ ನೆರೆ ಇದೀಗ ಬರದಿಂದ ರೈತರು ನಷ್ಟದ ಸುಳಿಗೆ ಸಿಲುಕಿ ಪರದಾಡುತ್ತಿದ್ದಾರೆ. ಚುನಾವಣೆ ವೇಳೆ ನಾವು ರೈತಪರ ಎಂದು ಹೇಳಿ ಅಧಿಕಾರಕ್ಕೆ ಬರುವ ಪಕ್ಷಗಳು ಗೆದ್ದ ಮೇಲೆ ರೈತರತ್ತ ತಿರುಗಿಯೂ‌ ನೋಡುವುದಿಲ್ಲ ಎಂಬ ಆರೋಪವಿದೆ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಟಿವಿ ಭಾರತ್ ಜೊತೆಗೆ ಮಾತನಾಡಿರುವ ರೈತರು, ಸರ್ಕಾರಕ್ಕೆ ಹತ್ತು ಹಲವು ಸಲಹೆ, ಬೇಡಿಕೆಗಳನ್ನು ಇರಿಸಿದ್ದಾರೆ.

 ಸಪ್ತ ನದಿಗಳು ಹರಿಯುತ್ತಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಈವರೆಗೂ ಆಳಿದ ಸರ್ಕಾರಗಳಿಗೆ ಸಾಧ್ಯವಾಗಿಲ್ಲ. ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ಕೇಂದ್ರದಿಂದ ಡಿಪಿಆರ್ ಆಗಿದ್ದರೂ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಮಲಪ್ರಭಾ ನದಿಯ 11 ಏತ ನೀರಾವರಿ ಯೋಜನೆಗಳು, ಕೃಷ್ಣಾ ನದಿಯ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ, ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆ, ಅಮ್ಮಾಜೇಶ್ವರಿ, ಕೊಟ್ಟಲಗಿ ಹಾಗೂ ಘಟಪ್ರಭಾ ನದಿಯ ಘಟ್ಟಿ ಬಸವೇಶ್ವರ ಏತ ನೀರಾವರಿ ಯೋಜನೆ ಸೇರಿ ಇನ್ನಿತರ ಕಾಮಗಾರಿಗಳನ್ನು ಆರಂಭಿಸಿ, ಪೂರ್ಣಗೊಳಿಸಿ, ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬುದು ರೈತರ ಒತ್ತಾಯ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!