ಬೆಳಗಾವಿ: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ.
ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ.
ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ ಈ ಹಿಂದೆ ನೆರೆ ಇದೀಗ ಬರದಿಂದ ರೈತರು ನಷ್ಟದ ಸುಳಿಗೆ ಸಿಲುಕಿ ಪರದಾಡುತ್ತಿದ್ದಾರೆ. ಚುನಾವಣೆ ವೇಳೆ ನಾವು ರೈತಪರ ಎಂದು ಹೇಳಿ ಅಧಿಕಾರಕ್ಕೆ ಬರುವ ಪಕ್ಷಗಳು ಗೆದ್ದ ಮೇಲೆ ರೈತರತ್ತ ತಿರುಗಿಯೂ ನೋಡುವುದಿಲ್ಲ ಎಂಬ ಆರೋಪವಿದೆ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಟಿವಿ ಭಾರತ್ ಜೊತೆಗೆ ಮಾತನಾಡಿರುವ ರೈತರು, ಸರ್ಕಾರಕ್ಕೆ ಹತ್ತು ಹಲವು ಸಲಹೆ, ಬೇಡಿಕೆಗಳನ್ನು ಇರಿಸಿದ್ದಾರೆ.
ಸಪ್ತ ನದಿಗಳು ಹರಿಯುತ್ತಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಈವರೆಗೂ ಆಳಿದ ಸರ್ಕಾರಗಳಿಗೆ ಸಾಧ್ಯವಾಗಿಲ್ಲ. ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ಕೇಂದ್ರದಿಂದ ಡಿಪಿಆರ್ ಆಗಿದ್ದರೂ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಮಲಪ್ರಭಾ ನದಿಯ 11 ಏತ ನೀರಾವರಿ ಯೋಜನೆಗಳು, ಕೃಷ್ಣಾ ನದಿಯ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ, ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆ, ಅಮ್ಮಾಜೇಶ್ವರಿ, ಕೊಟ್ಟಲಗಿ ಹಾಗೂ ಘಟಪ್ರಭಾ ನದಿಯ ಘಟ್ಟಿ ಬಸವೇಶ್ವರ ಏತ ನೀರಾವರಿ ಯೋಜನೆ ಸೇರಿ ಇನ್ನಿತರ ಕಾಮಗಾರಿಗಳನ್ನು ಆರಂಭಿಸಿ, ಪೂರ್ಣಗೊಳಿಸಿ, ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬುದು ರೈತರ ಒತ್ತಾಯ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…