ಬೆಳಗಾವಿ: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ.
ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ.
ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ ಈ ಹಿಂದೆ ನೆರೆ ಇದೀಗ ಬರದಿಂದ ರೈತರು ನಷ್ಟದ ಸುಳಿಗೆ ಸಿಲುಕಿ ಪರದಾಡುತ್ತಿದ್ದಾರೆ. ಚುನಾವಣೆ ವೇಳೆ ನಾವು ರೈತಪರ ಎಂದು ಹೇಳಿ ಅಧಿಕಾರಕ್ಕೆ ಬರುವ ಪಕ್ಷಗಳು ಗೆದ್ದ ಮೇಲೆ ರೈತರತ್ತ ತಿರುಗಿಯೂ ನೋಡುವುದಿಲ್ಲ ಎಂಬ ಆರೋಪವಿದೆ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಟಿವಿ ಭಾರತ್ ಜೊತೆಗೆ ಮಾತನಾಡಿರುವ ರೈತರು, ಸರ್ಕಾರಕ್ಕೆ ಹತ್ತು ಹಲವು ಸಲಹೆ, ಬೇಡಿಕೆಗಳನ್ನು ಇರಿಸಿದ್ದಾರೆ.
ಸಪ್ತ ನದಿಗಳು ಹರಿಯುತ್ತಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಈವರೆಗೂ ಆಳಿದ ಸರ್ಕಾರಗಳಿಗೆ ಸಾಧ್ಯವಾಗಿಲ್ಲ. ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ಕೇಂದ್ರದಿಂದ ಡಿಪಿಆರ್ ಆಗಿದ್ದರೂ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಮಲಪ್ರಭಾ ನದಿಯ 11 ಏತ ನೀರಾವರಿ ಯೋಜನೆಗಳು, ಕೃಷ್ಣಾ ನದಿಯ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ, ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆ, ಅಮ್ಮಾಜೇಶ್ವರಿ, ಕೊಟ್ಟಲಗಿ ಹಾಗೂ ಘಟಪ್ರಭಾ ನದಿಯ ಘಟ್ಟಿ ಬಸವೇಶ್ವರ ಏತ ನೀರಾವರಿ ಯೋಜನೆ ಸೇರಿ ಇನ್ನಿತರ ಕಾಮಗಾರಿಗಳನ್ನು ಆರಂಭಿಸಿ, ಪೂರ್ಣಗೊಳಿಸಿ, ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬುದು ರೈತರ ಒತ್ತಾಯ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…