ಜನ ಮನದ ನಾಡಿ ಮಿಡಿತ

Advertisement

ಮೇ.4ರಂದು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಉಡುಪಿ: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 4:30ರವರೆಗೆ ಮಿಲಾಗ್ರಿಸ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಪದವೀಧರಲ್ಲದೇ, ವಾಣಿಜ್ಯ ಮತ್ತು ನಿರ್ವಹಣೆ, ಇಂಜಿನಿಯರಿಂಗ್, ಡಿಪ್ಲೋಮಾ ವಿದ್ಯಾರ್ಥಿಗಳು ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ. ಎಸೆಸೆಲ್ಸಿ ಬಳಿಕ ಡಿಪ್ಲೋಮ, ಐಟಿಐ ಕಲಿತ, ಪದವಿ ಪೂರ್ವ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೂ ಅವಕಾಶಗಳಿವೆ ಎಂದರು.
ಎಂಟು ಐಟಿ ಕಂಪೆನಿಗಳು, ಎಂಟು ಹಾಸ್ಪಿಟಾಲಿಟಿ ಕಂಪೆನಿ, ಐದು ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಏವಿಯೇಷನ್, ಗೇಮಿಂಗ್, ಫಾರ್ಮಾ, ನರ್ಸಿಂಗ್, ಐಟಿ ಸಾಫ್ಟ್‌ವೇರ್, ಅಟೋಮೊಬೈಲ್, ಜವಳಿ, ಮೊಬೈಲ್ ವಿತರಣೆ ಸೇರಿದಂತೆ 45 ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವುದನ್ನು ಖಾತ್ರಿ ಪಡಿಸಿವೆ ಎಂದು ತಿಳಿಸಿದರು.
ಸುಮಾರು 1000 ಮಂದಿ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಈಗಾಗಲೇ 625 ಮಂದಿ ಹೆಸರು ನೊಂದಾಯಿಸಿಕೊಂಡಿದ್ದಾರೆ. ಇಲ್ಲಿ 500ಕ್ಕೂ ಅಧಿಕ ಉದ್ಯೋಗಗಳು ಲಭ್ಯವಿರುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಉಪಪ್ರಾಂಶುಪಾಲೆ ಪ್ರೊ.ಸೋಫಿಯಾ ಡಯಾಸ್, ಡಾ.ಜಯರಾಮ ಶೆಟ್ಟಿಗಾರ್, ಕಾರ್ತಿಕ್ ನಾಯಕ್, ರವಿನಂದನ್ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!