ಉಡುಪಿ: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 4:30ರವರೆಗೆ ಮಿಲಾಗ್ರಿಸ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿನ್ಸೆಂಟ್ ಆಳ್ವ ತಿಳಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಪದವೀಧರಲ್ಲದೇ, ವಾಣಿಜ್ಯ ಮತ್ತು ನಿರ್ವಹಣೆ, ಇಂಜಿನಿಯರಿಂಗ್, ಡಿಪ್ಲೋಮಾ ವಿದ್ಯಾರ್ಥಿಗಳು ನೊಂದಣಿಯನ್ನು ಮಾಡಿಕೊಳ್ಳಬಹುದಾಗಿದೆ. ಎಸೆಸೆಲ್ಸಿ ಬಳಿಕ ಡಿಪ್ಲೋಮ, ಐಟಿಐ ಕಲಿತ, ಪದವಿ ಪೂರ್ವ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೂ ಅವಕಾಶಗಳಿವೆ ಎಂದರು.
ಎಂಟು ಐಟಿ ಕಂಪೆನಿಗಳು, ಎಂಟು ಹಾಸ್ಪಿಟಾಲಿಟಿ ಕಂಪೆನಿ, ಐದು ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಏವಿಯೇಷನ್, ಗೇಮಿಂಗ್, ಫಾರ್ಮಾ, ನರ್ಸಿಂಗ್, ಐಟಿ ಸಾಫ್ಟ್ವೇರ್, ಅಟೋಮೊಬೈಲ್, ಜವಳಿ, ಮೊಬೈಲ್ ವಿತರಣೆ ಸೇರಿದಂತೆ 45 ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವುದನ್ನು ಖಾತ್ರಿ ಪಡಿಸಿವೆ ಎಂದು ತಿಳಿಸಿದರು.
ಸುಮಾರು 1000 ಮಂದಿ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು, ಈಗಾಗಲೇ 625 ಮಂದಿ ಹೆಸರು ನೊಂದಾಯಿಸಿಕೊಂಡಿದ್ದಾರೆ. ಇಲ್ಲಿ 500ಕ್ಕೂ ಅಧಿಕ ಉದ್ಯೋಗಗಳು ಲಭ್ಯವಿರುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಉಪಪ್ರಾಂಶುಪಾಲೆ ಪ್ರೊ.ಸೋಫಿಯಾ ಡಯಾಸ್, ಡಾ.ಜಯರಾಮ ಶೆಟ್ಟಿಗಾರ್, ಕಾರ್ತಿಕ್ ನಾಯಕ್, ರವಿನಂದನ್ ಭಟ್ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…