ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ ಹಳೆ ವಿದ್ಯಾರ್ಥಿ ಸಂಘ (WENAMITAA)ದ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಹಾಗೂ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮುಲ್ಕಿಯ ಸ್ಥಾಪಕ ಅಧ್ಯಕ್ಷರಾದ ಮುಲ್ಕಿ ಜೀವನ್ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಮುಂದಿನ ದಿನದಲ್ಲಿ ಹಳೆ ವಿದ್ಯಾರ್ಥಿ ಹಾಗೂ ಕೈಗಾರಿಕೆ ಮತ್ತು ಕ್ಯಾಂಪಸ್ ನ ಸಂಬಂಧ, ಶೈಕ್ಷಣಿಕ ಹಾಗೂ ಕ್ಯಾಂಪಸ್ ರಿಕ್ರುಟ್ ಮೆಂಟ್ ಬಗ್ಗೆ ಹಳೇ ವಿದ್ಯಾರ್ಥಿಗಳ ಸಹಕಾರ ಕೋರಲಾಯಿತು. ಈ ಎಲ್ಲಾ ವಿಷಯದ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು. 2024ರ ಜೂಲೈ ತಿಂಗಳ 27 ರಂದು ಕೊಚ್ಚಿಯಲ್ಲಿ ನಡೆಯುವ ಗ್ಲೋಬಲ್ ಆಲುಮಿನಿ ಮೀಟ್ 2024 ರಲ್ಲಿ ಜಗತ್ತಿನ ವಿವಿಧೆಡೆ ಇರುವ ಹಳೇ ವಿದ್ಯಾರ್ಥಿ ಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ನಿರಂಜನ್ ಚಿಪ್ಲುoಕರ್, ಡೀನ್ ರಾಜೇಶ್ ಶೆಟ್ಟಿ , ಡೀನ್ ಶ್ರೀನಿವಾಸ್ ರಾವ್, ಡೀನ್ ಐ. ರಮೇಶ್ ಮಿತಂತಾಯ, ನಿರ್ದೇಶಕ ಯೋಗೀಶ್ ಹೆಗ್ಡೆ, ಸಂಘದ ಉಪಾಧ್ಯಕ್ಷ ಅವಿನಾಶ್ ಕೃಷ್ಣ ಕುಮಾರ್, ಕೋಶಾಧಿಕಾರಿ ಡಾ. ಹರ್ಷಿತಾ, ನಿಕಟ ಪೂರ್ವ ಅಧ್ಯಕ್ಷೆ ಪ್ರಭಾ ನಿರಂಜನ್ಹಾ ಗೂ ಎಲ್ಲಾ ವಿಭಾಗದ ಸಂಚಾಲಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ರಂಜಿತ್ ಭಟ್ ವಂದಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…