ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ ಹಳೆ ವಿದ್ಯಾರ್ಥಿ ಸಂಘ (WENAMITAA)ದ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಹಾಗೂ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮುಲ್ಕಿಯ ಸ್ಥಾಪಕ ಅಧ್ಯಕ್ಷರಾದ ಮುಲ್ಕಿ ಜೀವನ್ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಮುಂದಿನ ದಿನದಲ್ಲಿ ಹಳೆ ವಿದ್ಯಾರ್ಥಿ ಹಾಗೂ ಕೈಗಾರಿಕೆ ಮತ್ತು ಕ್ಯಾಂಪಸ್ ನ ಸಂಬಂಧ, ಶೈಕ್ಷಣಿಕ ಹಾಗೂ ಕ್ಯಾಂಪಸ್ ರಿಕ್ರುಟ್ ಮೆಂಟ್ ಬಗ್ಗೆ ಹಳೇ ವಿದ್ಯಾರ್ಥಿಗಳ ಸಹಕಾರ ಕೋರಲಾಯಿತು. ಈ ಎಲ್ಲಾ ವಿಷಯದ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು. 2024ರ ಜೂಲೈ ತಿಂಗಳ 27 ರಂದು ಕೊಚ್ಚಿಯಲ್ಲಿ ನಡೆಯುವ ಗ್ಲೋಬಲ್ ಆಲುಮಿನಿ ಮೀಟ್ 2024 ರಲ್ಲಿ ಜಗತ್ತಿನ ವಿವಿಧೆಡೆ ಇರುವ ಹಳೇ ವಿದ್ಯಾರ್ಥಿ ಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ನಿರಂಜನ್ ಚಿಪ್ಲುoಕರ್, ಡೀನ್ ರಾಜೇಶ್ ಶೆಟ್ಟಿ , ಡೀನ್ ಶ್ರೀನಿವಾಸ್ ರಾವ್, ಡೀನ್ ಐ. ರಮೇಶ್ ಮಿತಂತಾಯ, ನಿರ್ದೇಶಕ ಯೋಗೀಶ್ ಹೆಗ್ಡೆ, ಸಂಘದ ಉಪಾಧ್ಯಕ್ಷ ಅವಿನಾಶ್ ಕೃಷ್ಣ ಕುಮಾರ್, ಕೋಶಾಧಿಕಾರಿ ಡಾ. ಹರ್ಷಿತಾ, ನಿಕಟ ಪೂರ್ವ ಅಧ್ಯಕ್ಷೆ ಪ್ರಭಾ ನಿರಂಜನ್ಹಾ ಗೂ ಎಲ್ಲಾ ವಿಭಾಗದ ಸಂಚಾಲಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ರಂಜಿತ್ ಭಟ್ ವಂದಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…