ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ವಿಟ್ಲ ಪೇಟೆಯಲ್ಲಿ ಬಿಸಿಲಿನ ತಾಪಕ್ಕೆ ಬಂತು ನೀರಿನ ಫಾಗಿಂಗ್ ಪ್ರಯೋಗ


ವಿಟ್ಲ: ಕರಾವಳಿ ಪರಿಸರದಾದ್ಯಂತ ಬಿಸಿಲಿನ ಅಬ್ಬರಕ್ಕೆ ಜನರು ಹೊರಗಡೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ವಾಹನ ಸವಾರರು ಮತ್ತು ಪಾದಾಚಾರಿಗಳು, ವ್ಯಾಪಾರಿಗಳು ಬವಣೆ ಅನುಭವಿಸುತ್ತಿದ್ದಾರೆ. ಇದರ ನಡುವೆಯೂ ವಿಟ್ಲದ ಎರಡು ಅಂಗಡಿಯವರು ಬಿಸಿಲಿನ ಉಷ್ಣಾಂಶವನ್ನು ತಡೆಯಲು ಅಂಗಡಿ ಮುಂಭಾಗ ನೀರಿನ ಫಾಗಿಂಗ್ ಮಾಡುವ ಮೂಲಕ ವಿಶೇಷ ಪ್ರಯೋಗ ಮಾಡಿದ್ದಾರೆ.


ವಿಟ್ಲ ನಾಲ್ಕು ಮಾರ್ಗ ರಸ್ತೆಯಲ್ಲಿರುವ ಕಿಟ್ ಕ್ಯಾಟ್ ಪೆಟ್ ಶಾಪ್ ಮಾಲಕ ಇಸ್ಮಾಯಿಲ್, ಮತ್ತು ಮೊಬೈಲ್ ಅಂಗಡಿ ಮಾಲಕ ಖಲಂದರ್ ಅವರು ತಮ್ಮ ಅಂಗಡಿ ಮುಂಭಾಗದ ಮೇಲ್ಭಾಗದಲ್ಲಿ ನೀರಿನ ಪೈಪ್ ಅಳವಡಿಸಿ ಫಾಗಿಂಗ್ ಮಾಡಿದ್ದಾರೆ. ಇದು ಕೇವಲ ಇವರ ಅಂಗಡಿಗೆ ಬರುವ ಗ್ರಾಹಕರಿಗೆ ಮಾತ್ರವಲ್ಲದೇ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಪಾದಾಚಾರಿಗಳಿಗೆ ಪ್ರಯೋಜನಕಾರಿಯಾಗಿದೆ. ಮಧ್ಯಾಹ್ನ ವೇಳೆ ಉಂಟಾಗುವ ಸುಡು ಬಿಸಿಲಿಗೆ ಹೆಚ್ಚಾಗಿ ಫಾಗಿಂಗ್ ಮಾಡಲಾಗುತ್ತಿದೆ. ನೀರಿನ ಅಭಾವವನ್ನು ಅರಿತು ದಿನಕ್ಕೆ ವಿವಿಧ ಸಮಯಗಳಲ್ಲಿ ದಿನಕ್ಕೆ ಒಂದು ಗಂಟೆ ಫಾಗಿಂಗ್ ಮಾಡಲಾಗುತ್ತಿದ್ದು, ಸುಡು ಬಿಸಿಲಿಗೆ ಫಾಗಿಂಗ್ ಆಗುವಾಗ ಜನರಿಗೆ ತಂಪೆರೆಯುತ್ತದೆ. ಒಂದು ಗಂಟೆ ಫಾಗಿಂಗ್ ಮಾಡಲು ೨೦ ಲೀಟರ್ ನೀರು ಬೇಕಾಗುತ್ತದೆ. ಇದು ಅಳವಡಿಸಿದ್ದರಿಂದ ಅಂಗಡಿ ಒಳಗಡೆ ನಿಂತು ವ್ಯಾಪಾರ ಮಾಡಲು ಹಾಗೂ ಗ್ರಾಹಕರಿಗೆ, ರಸ್ತೆಯಲ್ಲಿ ತೆರಳುವ ಸಾರ್ವಜನಿಕರಿಗೂ ಕೂಡಾ ಇದು ಪ್ರಯೋಜವಾಗಿದೆ ಎಂದು ಅಂಗಡಿ ಮಾಲಕ ಇಸ್ಮಾಯಿಲ್ ಅವರು ಹೇಳುತ್ತಾರೆ.


ಈ ಪ್ರಯೋಗದಿಂದ ಕೇವಲ ಇವರ ಎರಡು ಅಂಗಡಿಗಳಿಗೆ ಮಾತ್ರ ಪ್ರಯೋಜನವಲ್ಲ. ರಸ್ತೆಯಲ್ಲಿ ತೆರಳುವ ಪಾದಾಚಾರಿಗಳಿಗೂ ಪ್ರಯೋಜವಾಗಿದೆ. ಇವರ ಈ ರೀತಿಯ ಪ್ರಯೋಗದ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!