ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದ ಮನೆಯಲ್ಲಿಯೇ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು, ಕಚೇರಿಗೆ ಕರೆದೊಯ್ಯುತ್ತಿದ್ದಾರೆ.
ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳಿಸಿದ್ದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ.
ಮಧ್ಯಂತರ ನಿರೀಕ್ಷಣಾ ಜಾಮೀನು ವಜಾಗೊಳ್ಳುತ್ತಿದ್ದಂತೆ ಹೆಚ್.ಡಿ ರೇವಣ್ಣಗೆ ಬಂಧನದ ಭೀತಿ ಶುರುವಾಗಿತ್ತು. ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಆಗಮಿಸಿದ್ದರು.
ದೇವೇಗೌಡರ ಮನೆಯಲ್ಲಿ ರೇವಣ್ಣ ಅವರು ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದು ಮನೆಯ ಮುಂಬಾಗಿಲು ಹಾಗೂ ಹಿಂಬಾಗಿಲಿನಲ್ಲಿ ನಿಂತುಕೊಂಡಿದ್ದರು. ಇನ್ನು ರೇವಣ್ಣ ಮನೆಯಿಂದ ಹೊರಬರುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಪದ್ಮನಾಭನಗರದ ಮನೆಯಲ್ಲಿಯೇ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು, ಕಚೇರಿಗೆ ಕರೆದೊಯ್ಯುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ರೇವಣ್ಣ ಹಾಗೂ ಇತರರು ಅಪಹರಣ ಮಾಡಿದ್ದರು. ಈ ಮೂಲಕ ಸಂತ್ರಸ್ತೆಯನ್ನು ಬೆದರಿಸಲು ಯತ್ನಿಸಿದ್ದರು. ಇದೇ ಕಾರಣಕ್ಕೆ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ. ಕಚೇರಿಗೆ ಕರೆದೊಯ್ದು, ಬಂಧನದ ಕಾನೂನು ಪ್ರಕ್ರಿಯೆ ನಡೆಸಲಾಗುವುದು’ ಎಂದು ಎಸ್ಐಟಿ ಮೂಲಗಳು ಹೇಳಿವೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…