ಆಗುಂಬೆ ಘಾಟ್ನ ಸೂರ್ಯಾಸ್ತ ಸ್ಥಳದ ರಿಟೈನರ್ ಗೋಡೆಯ ಬಳಿ ಬಿರುಕು ಕಂಡುಬಂದಿದೆ. ಭಾರಿ ವಾಹನಗಳ ಓಡಾಟಕ್ಕೆ ತಡೆಗೋಡೆ ಕುಸಿದು ಬೀಳುವ ಸಾಧ್ಯತೆ ಇರುವುದರಿಂದ ಘಾಟಿ ಬಂದ್ ಆಗುವ ಶಂಕೆ ಎದುರಾಗಿದೆ. ಕರಾವಳಿ ಮಲೆನಾಡನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಸೂರ್ಯಾಸ್ತ ಸ್ಥಳದ ಬಳಿಯ ರಸ್ತೆಯ ತಡೆಗೋಡೆಯ ಬಳಿ ಬಿರುಕು ಕಂಡಿದ್ದು ಘನ ವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು ಘಾಟಿ ಬಂದ್ ಆಗುವ ಭೀತಿ ಎದುರಾಗಿದೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 14ನೇ ತಿರುವು ಸೂರ್ಯಾಸ್ತ ಸ್ಥಳದ ಬಳಿ ಹಾಗೂ ಘಾಟಿ ಆರಂಭದ ಮಧ್ಯೆ ಘನ ವಾಹನಗಳು ರಸ್ತೆಯ ಬದಿಯಲ್ಲಿ ಸಂಚರಿಸಿದರೆ ಸಂಪೂರ್ಣ ಕುಸಿಯುವ ಸ್ಥಿತಿ ಇದೆ. ಪ್ರಸ್ತುತ ಈ ಕಿರಿದಾದ ಘಾಟಿಯಲ್ಲಿ ಹಲವಾರು ಘನವಾಹನಗಳು ಸಂಚರಿಸುತ್ತಿವೆ. ಈ ಹಿಂದೆ ಕೆಲವೆಡೆ ಘನ ವಾಹನಗಳು ಢಿಕ್ಕಿ ಹೊಡೆದ ಪರಿಣಾಮ ತಡೆ ಗೋಡೆಗಳಿಗೆ ಹಾನಿಯಾಗಿತ್ತು. ಇದೀಗ ಘಾಟಿ ಆರಂಭದಲ್ಲಿ ರಸ್ತೆ ತೀರಾ ಕಿರಿದಾಗಿದ್ದು, ಒಂದು ವಾಹನ ಸಂಚರಿಸುವುದೂ ಕಷ್ಟ ಎಂಬಂತಿದೆ. ಇಂಥ ಸಂದರ್ಭದಲ್ಲಿ ಘನವಾಹನಗಳ ಸಂಚಾರದಿಂದ ಸಮಸ್ಯೆ ಬಿಗಡಾಯಿಸಬಹುದು ಎಂಬುದು ಸಾರ್ವಜನಿಕರ ಆತಂಕ.
ಶಾಲೆಗಳಿಗೆ ಬೇಸಿಗೆ ರಜೆ ಇರುವುದರಿಂದ ಘಾಟಿ ಮಾರ್ಗವಾಗಿ ಸಂಚರಿಸುವ ವಾಹನಗಳ ಸಂಖ್ಯೆ ಹೆಚ್ಚು. ರಿಟೈನರ್ ಗೋಡೆಯ ಬಿರುಕು ತಕ್ಷಣ ದುರಸ್ತಿ ಪಡಿಸದಿದ್ದರೆ ಮಳೆಗಾಲದಲ್ಲಿ ಗೋಡೆ ಕುಸಿಯುವ ಸಾಧ್ಯತೆಯಿದೆ. ಪ್ರತಿ ವರ್ಷ ಘಾಟಿ ಭಾಗದ ಕೆಲವು ಭಾಗಗಳು ಕುಸಿದು ಬೀಳುತ್ತಿದ್ದು, ಅವುಗಳನ್ನು ದುರಸ್ತಿ ಮಾಡುತ್ತಿಲ್ಲ. ಇದು ಕೂಡ ಬಹುತೇಕ ಘಾಟ್ ವಿಭಾಗ ದುರ್ಬಲವಾಗಲು ಕಾರಣವಾಗಿದೆ.ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಸುತ್ತಮುತ್ತಲಿನ ಜನರು ವೈದ್ಯಕೀಯ ಚಿಕಿತ್ಸೆಗಾಗಿ ಕೆಎಂಸಿ ಮಣಿಪಾಲ ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಈ ಜನರಿಗೆ ಆಗುಂಬೆ ಘಾಟಿ ಬಹಳ ಮುಖ್ಯವಾಗಿದೆ. ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಂಡು ಬಿರುಕು ಬಿಟ್ಟಿರುವುದನ್ನು ದುರಸ್ತಿ ಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಆಗುಂಬೆ ಘಾಟಿಯ ಅರ್ಧಭಾಗ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೆ ಬರುವುದರಿಂದ ಅಲ್ಲಿನ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗಿದೆ. ಅವರು ಕೂಡಲೇ ಎಂಜಿನಿಯರ್ಗಳನ್ನು ಕಳುಹಿಸಿ ಪರಿಶೀಲನೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…