ಕಾರ್ಯಕ್ರಮವೊಂದರಲ್ಲಿ ಹಾಡುತಿದ್ದ ಬಾಲಿವುಡ್ ನ ಖ್ಯಾತ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದ ಘಟನೆ ನಡೆದಿದೆ.
ಸುನಿಧಿ ಚೌಹಾಣ್ ಇತ್ತೀಚಿನ ದಿನಗಳಲ್ಲಿ ಅನೇಕ ಮ್ಯೂಸಿಕ್ ಕಾನ್ಸಾರ್ಟ್ ಗಳನ್ನು ನೀಡುತ್ತಿದ್ದಾರೆ. ಅದೇ ರೀತಿ ಡೆಹ್ರಾಡೋನ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸುನಿಧಿ ಹಾಡುತ್ತಿದ್ದಾಗ ಅವರತ್ತ ಅಭಿಮಾನಿಯೊಬ್ಬ ಪ್ಲ್ಯಾಸ್ಟಿಕ್ ಬಾಟಲಿಯನ್ನು ಎಸೆದಿದ್ದಾನೆ. ಆದರೆ ಇದರಿಂದ ವಿಚಲಿತರಾಗದ ಸುನಿಧಿ, “ಬಾಟಲಿಗಳನ್ನು ಎಸೆಯುವುದರಿಂದ ಏನಾಗುತ್ತದೆ? ಏನೂ ಇಲ್ಲ. ಇದು ಶೋಗೆ ಅಡ್ಡಿ ಆಗುತ್ತದೆ. ನಿಮಗೆ ಅದು ಬೇಕೇ?” ಎಂದು ಕೇಳಿದ್ದಾರೆ. ಇದಕ್ಕೆ ಎಲ್ಲರೂ ಒಟ್ಟಾಗಿ ಒಂದೇ ಧ್ವನಿಯಲ್ಲಿ “ಇಲ್ಲ” ಎಂದು ಹೇಳಿದ್ದಾರೆ.
ಕಾರ್ಯಕ್ರಮದ ನಂತರ ಸುನಿಧಿ ಕಾನ್ಸಾರ್ಟ್ ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ‘ಶೀಲಾ ಕಿ ಜವಾನಿ’, ‘ಕಮ್ಲಿ’, ‘ಕ್ರೇಜಿ ಕಿಯಾ ರೇ’, ‘ಆಜಾ ನಾಚ್ಲೆ’, ‘ಬೀಡಿ, ‘ದೇಸಿ ಗರ್ಲ್’, ‘ಧೂಮ್ ಮಚಾಲೆ’, ಹೀಗೆ ಹತ್ತಾರು ಸೂಪರ್ ಹಿಟ್ ಹಾಡುಗಳಿಗೆ ಸುನಿಧಿಯವರ ಧ್ವನಿ ಸುಮಧುರವಾಗಿ ಮೂಡಿಬಂದಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…