ಕರಾವಳಿ

ದಕ್ಷಿಣ ಕನ್ನಡ : ಹೆಚ್ಚುತ್ತಿರುವ ತಾಪಮಾನ, ಆರೋಗ್ಯ ಇಲಾಖೆಯಿಂದ ಮಾಹಿತಿ

ದಕ್ಷಿಣ ಕನ್ನಡ :ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಿಪರೀತ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ, ತಾಲೂಕ ಮಟ್ಟದಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ ಎಚ್ .ಆರ್. ತಿಮ್ಮಯ್ಯ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಶಕಗಳ ತಾಪಮಾನವನ್ನು ಗಮನಿಸಿದಾಗ 32 ಡಿಗ್ರಿ ಸೆಲ್ಸಿಯಸ್ ನಿಂದ 33ಡಿ ಸೆ.ದಾಖಲಾಗುತ್ತಿತ್ತು. ಈ ಬಾರಿ ತಾಪಮಾನ 36ರಿಂದ 40 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ. ಈ ರೀತಿ ತಾಪಮಾನದಿಂದ ಬಿಸಿಲಿನಲ್ಲಿ ಹೆಚ್ಚು ಓಡಾಡುತ್ತಿರುವವರಿಗೆ ತಲೆ ನೋವು, ಸುಸ್ತು, ನಿಶ್ಯಕ್ತಿ, ಚರ್ಮ ತುರಿಕೆ, ಜ್ವರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಕೆಲವೊಮ್ಮೆ ಬಿಸಿಲಿನಾಘಾತ ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಕಷ್ಟು ಮುಂಜಾಗ್ರತೆಯ
ಕ್ರಮ ಕೈಗೊಳ್ಳುವ ಅಗತ್ಯ ವಿದೆ ಎಂದು ಡಾ.ತಿಮ್ಮಯ್ಯ ತಿಳಿಸಿದ್ದಾರೆ.

ಬಿಸಿಲಿನ ಝಳ ಹೆಚ್ಚಿರುವ ಸಂದರ್ಭದಲ್ಲಿ ಹೊರಗೆ ಓಡಾಡದೆ ಇರುವುದು ಸೂಕ್ತ. ಶುದ್ಧ ನೀರಿನ ಸೇವನೆ, ಮಜ್ಜಿಗೆ ಸೇವನೆ, ಬಿಳಿ ಅಥವಾ ತಿಳಿ ಬಣ್ಣದ ಬಟ್ಟೆಧರಿಸುವುದು, ಬಿಸಿಲಿನ ನೇರಾಘಾತ ತಡೆಯಲು ಚಪ್ಪಲಿ ಧರಿಸುವುದು, ಕೊಡೆ ಬಳಸುವುದು ಉತ್ತಮ. ದೇಹ ನಿರ್ಜಲೀಕರಣವಾಗದಂತೆ ಎಚ್ಚರ ವಹಿಸಬೇಕು ಎಂದು ಡಾ.ತಿಮ್ಮಯ್ಯ ಸಲಹೆ ನೀಡಿದರು.

ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚುತ್ತಿರುವ ಕಾರಣ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚುತ್ತಿವೆ. ಡೆಂಗ್ಯೂ ಪ್ರಕರಣಗಳು ಕಂಡು ಬಂದಿವೆ. ಹೊರ ಜಿಲ್ಲೆಯ ಪ್ರಯಾಣಿಕರು ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾರಣ ಡೆಂಗ್ಯೂ ಪೀಡಿತರ ಸಂಪರ್ಕದಿಂದಲೂ ಅಲ್ಪ ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ನವೀನ್ ಚಂದ್ರ ಕುಲಾಲ್ ತಿಳಿಸಿದ್ದಾರೆ.ನಾವು ಸೇವಿಸುವ ಮಸಾಲೆಯುಕ್ತ ಆಹಾರ ಪದಾರ್ಥಗಳು ಬೇಸಗೆಯಲ್ಲಿ ಸೂಕ್ತವಲ್ಲ ಎಂದು ಡಾ.ನವೀನ್ ಕುಲಾಲ್ ಸಲಹೆ ನೀಡಿದರು. ಸಂವಾದ ಗೋಷ್ಠಿಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಂಡ ಮಾಧ್ಯಮ ಸಂವಾದ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಾದಕ ದ್ರವ್ಯ ಕಳ್ಳಸಾಗಣೆ, ಸಹೋದರರ ಬಂಧನ….!

ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್‌ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ…

11 hours ago

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪ*ತ್ತೆ….!

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ನೇತ್ರಾವತಿ ಹೊಸ ಸೇತುವೆಯ…

12 hours ago

ಬಂಟ್ವಾಳ: ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆ*ಂಕಿ….!

ಸಜೀಪ ಮೂಡದ ಪೆರ್ವ ಸಮೀಪದ ಕೊಯಿಲ ಎಂಬಲ್ಲಿ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಪೆರ್ವ ರಸ್ತೆ…

12 hours ago

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…

4 days ago

ಮಂಗಳೂರು: ನಿಟ್ಟೆ ವಿ.ವಿ. ಮಾಧ್ಯಮ ಸಮಾವೇಶ ಸಮಾರೋಪ…!

ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…

5 days ago

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…

5 days ago