ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಇದೀಗ ಕಸದ ಕೊಂಪೆಯಾಗಿ ಮಾರ್ಪಡುತ್ತಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಪ್ಲಾಸ್ಟಿಕ್ ಬಾಟಲ್, ಬಿಯರ್ ಬಾಟಲ್ ಹಾಗೂ ತ್ಯಾಜ್ಯ ರಾಶಿಯಿಂದ ಬೀಚ್ ನ ಅಂದ ಕೆಟ್ಟುಹೋಗಿದೆ.
ಮಲ್ಪೆಯ ಬೀಚ್ ಗೆ ಈಗ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ ಸಾವಿರಾರು ಜನರು ಬೀಚ್ ವಿಸಿಟ್ ಮಾಡುತ್ತಿದ್ದಾರೆ. ಆದ್ರೆ ಬೀಚ್ ನ ಬಲ ಭಾಗದ ಪ್ರದೇಶ ಕಸದಿಂದ ಕೂಡಿದ್ದು ನಿರ್ವಹಣೆ ಇಲ್ಲದೇ ಬೀಚ್ ಸೊರಗಿದೆ. ಒಂದು ಕಡೆ ವಾಟರ್ ಗೇಮ್ , ಪ್ಲೋಟಿಂಗ್ ಬ್ರಿಡ್ಜ್ ನ ಅಂದ ಕಂಡರೆ ಇನ್ನೊಂದು ಭಾಗದಲ್ಲಿ ಬಿಯರ್ ಬಾಟಲಿ, ಪ್ಲಾಸ್ಟಿಕ್ ಬಾಟಲಿ, ಬಲೆಗಳು ಹಾಗೂ ಕಸದಿಂದ ತುಂಬಿದ್ದು ಬೀಚ್ ನಲ್ಲಿ ಕಾಲಿಡಲು ಅಸಹ್ಯವಾಗುತ್ತಿದೆ. ಸಂಜೆಯಾಗುತ್ತಲೇ ಈ ಭಾಗದಲ್ಲಿ ಯುವಕರ ತಂಡ ಪಾರ್ಟಿ ನಡೆಸುತ್ತಿದ್ದು, ಬಿಯರ್ ಬಾಟಲಿಗಳನ್ನು ಬೀಚ್ ಬದಿ ಬಿಸಾಡಿ ಹೋಗುತ್ತಿದ್ದಾರೆ.ಇದರಿಂದ ಇಂತಹ ಬಾಟಲಿಗಳು ಸಮುದ್ರಕ್ಕೆ ಸೇರುತ್ತಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಆದಷ್ಟು ಬೇಗ ಬೀಚ್ ಅಭಿವೃದ್ದಿ ಸಮಿತಿ ಈ ಬಗ್ಗೆ ಕಾಳಜಿ ವಹಿಸಿ ಬೀಚ್ ಸ್ವಚ್ಚತೆಯತ್ತ ಗಮನ ಸೆಳೆಯಬೇಕಾಗಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…