ಕರಾವಳಿ

ಮಲ್ಪೆ ಬೀಚ್‌ನ ಸೊಬಗನ್ನು ಕೆಡಿಸುತ್ತಿವೆ ಬಿಯರ್ ಬಾಟಲ್, ಪ್ಲಾಸ್ಟಿಕ್ ತ್ಯಾಜ್ಯ..!!

ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಇದೀಗ ಕಸದ ಕೊಂಪೆಯಾಗಿ ಮಾರ್ಪಡುತ್ತಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಪ್ಲಾಸ್ಟಿಕ್ ಬಾಟಲ್, ಬಿಯರ್ ಬಾಟಲ್ ಹಾಗೂ ತ್ಯಾಜ್ಯ ರಾಶಿಯಿಂದ ಬೀಚ್ ನ ಅಂದ ಕೆಟ್ಟುಹೋಗಿದೆ.


ಮಲ್ಪೆಯ ಬೀಚ್ ಗೆ ಈಗ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ ಸಾವಿರಾರು ಜನರು ಬೀಚ್ ವಿಸಿಟ್ ಮಾಡುತ್ತಿದ್ದಾರೆ. ಆದ್ರೆ ಬೀಚ್ ನ ಬಲ ಭಾಗದ ಪ್ರದೇಶ ಕಸದಿಂದ ಕೂಡಿದ್ದು ನಿರ್ವಹಣೆ ಇಲ್ಲದೇ ಬೀಚ್ ಸೊರಗಿದೆ. ಒಂದು ಕಡೆ ವಾಟರ್ ಗೇಮ್ , ಪ್ಲೋಟಿಂಗ್ ಬ್ರಿಡ್ಜ್ ನ ಅಂದ ಕಂಡರೆ ಇನ್ನೊಂದು ಭಾಗದಲ್ಲಿ ಬಿಯರ್ ಬಾಟಲಿ, ಪ್ಲಾಸ್ಟಿಕ್ ಬಾಟಲಿ, ಬಲೆಗಳು ಹಾಗೂ ಕಸದಿಂದ ತುಂಬಿದ್ದು ಬೀಚ್ ನಲ್ಲಿ ಕಾಲಿಡಲು ಅಸಹ್ಯವಾಗುತ್ತಿದೆ. ಸಂಜೆಯಾಗುತ್ತಲೇ ಈ ಭಾಗದಲ್ಲಿ ಯುವಕರ ತಂಡ ಪಾರ್ಟಿ ನಡೆಸುತ್ತಿದ್ದು, ಬಿಯರ್ ಬಾಟಲಿಗಳನ್ನು ಬೀಚ್ ಬದಿ ಬಿಸಾಡಿ ಹೋಗುತ್ತಿದ್ದಾರೆ.ಇದರಿಂದ ಇಂತಹ ಬಾಟಲಿಗಳು ಸಮುದ್ರಕ್ಕೆ ಸೇರುತ್ತಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಆದಷ್ಟು ಬೇಗ ಬೀಚ್ ಅಭಿವೃದ್ದಿ ಸಮಿತಿ ಈ ಬಗ್ಗೆ ಕಾಳಜಿ ವಹಿಸಿ ಬೀಚ್ ಸ್ವಚ್ಚತೆಯತ್ತ ಗಮನ ಸೆಳೆಯಬೇಕಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…

3 hours ago

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ 'ಸೇಫ್ ಫುಟ್‌ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ…

3 hours ago

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು…

3 hours ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

24 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

1 day ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

1 day ago