ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಇದೀಗ ಕಸದ ಕೊಂಪೆಯಾಗಿ ಮಾರ್ಪಡುತ್ತಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಪ್ಲಾಸ್ಟಿಕ್ ಬಾಟಲ್, ಬಿಯರ್ ಬಾಟಲ್ ಹಾಗೂ ತ್ಯಾಜ್ಯ ರಾಶಿಯಿಂದ ಬೀಚ್ ನ ಅಂದ ಕೆಟ್ಟುಹೋಗಿದೆ.
ಮಲ್ಪೆಯ ಬೀಚ್ ಗೆ ಈಗ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ ಸಾವಿರಾರು ಜನರು ಬೀಚ್ ವಿಸಿಟ್ ಮಾಡುತ್ತಿದ್ದಾರೆ. ಆದ್ರೆ ಬೀಚ್ ನ ಬಲ ಭಾಗದ ಪ್ರದೇಶ ಕಸದಿಂದ ಕೂಡಿದ್ದು ನಿರ್ವಹಣೆ ಇಲ್ಲದೇ ಬೀಚ್ ಸೊರಗಿದೆ. ಒಂದು ಕಡೆ ವಾಟರ್ ಗೇಮ್ , ಪ್ಲೋಟಿಂಗ್ ಬ್ರಿಡ್ಜ್ ನ ಅಂದ ಕಂಡರೆ ಇನ್ನೊಂದು ಭಾಗದಲ್ಲಿ ಬಿಯರ್ ಬಾಟಲಿ, ಪ್ಲಾಸ್ಟಿಕ್ ಬಾಟಲಿ, ಬಲೆಗಳು ಹಾಗೂ ಕಸದಿಂದ ತುಂಬಿದ್ದು ಬೀಚ್ ನಲ್ಲಿ ಕಾಲಿಡಲು ಅಸಹ್ಯವಾಗುತ್ತಿದೆ. ಸಂಜೆಯಾಗುತ್ತಲೇ ಈ ಭಾಗದಲ್ಲಿ ಯುವಕರ ತಂಡ ಪಾರ್ಟಿ ನಡೆಸುತ್ತಿದ್ದು, ಬಿಯರ್ ಬಾಟಲಿಗಳನ್ನು ಬೀಚ್ ಬದಿ ಬಿಸಾಡಿ ಹೋಗುತ್ತಿದ್ದಾರೆ.ಇದರಿಂದ ಇಂತಹ ಬಾಟಲಿಗಳು ಸಮುದ್ರಕ್ಕೆ ಸೇರುತ್ತಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಆದಷ್ಟು ಬೇಗ ಬೀಚ್ ಅಭಿವೃದ್ದಿ ಸಮಿತಿ ಈ ಬಗ್ಗೆ ಕಾಳಜಿ ವಹಿಸಿ ಬೀಚ್ ಸ್ವಚ್ಚತೆಯತ್ತ ಗಮನ ಸೆಳೆಯಬೇಕಾಗಿದೆ.
ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಿಸುತ್ತಿದ್ದ ಸಹೋದರಿಬ್ಬರನ್ನು ಬಂಧಿಸಲಾಗಿದೆ. ಬಂಟ್ವಾಳದ ಮಂಚಿ ಗ್ರಾಮದ ಪಂಜಾಲಕ್ರಾಸ್ನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದರಲ್ಲಿ…
ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಶವವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ನೇತ್ರಾವತಿ ಹೊಸ ಸೇತುವೆಯ…
ಸಜೀಪ ಮೂಡದ ಪೆರ್ವ ಸಮೀಪದ ಕೊಯಿಲ ಎಂಬಲ್ಲಿ ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ. ಪೆರ್ವ ರಸ್ತೆ…
ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…
ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…