ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಇದೀಗ ಕಸದ ಕೊಂಪೆಯಾಗಿ ಮಾರ್ಪಡುತ್ತಿದೆ. ಎಲ್ಲೆಂದರಲ್ಲಿ ಬಿಸಾಡಿರುವ ಪ್ಲಾಸ್ಟಿಕ್ ಬಾಟಲ್, ಬಿಯರ್ ಬಾಟಲ್ ಹಾಗೂ ತ್ಯಾಜ್ಯ ರಾಶಿಯಿಂದ ಬೀಚ್ ನ ಅಂದ ಕೆಟ್ಟುಹೋಗಿದೆ.
ಮಲ್ಪೆಯ ಬೀಚ್ ಗೆ ಈಗ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ ಸಾವಿರಾರು ಜನರು ಬೀಚ್ ವಿಸಿಟ್ ಮಾಡುತ್ತಿದ್ದಾರೆ. ಆದ್ರೆ ಬೀಚ್ ನ ಬಲ ಭಾಗದ ಪ್ರದೇಶ ಕಸದಿಂದ ಕೂಡಿದ್ದು ನಿರ್ವಹಣೆ ಇಲ್ಲದೇ ಬೀಚ್ ಸೊರಗಿದೆ. ಒಂದು ಕಡೆ ವಾಟರ್ ಗೇಮ್ , ಪ್ಲೋಟಿಂಗ್ ಬ್ರಿಡ್ಜ್ ನ ಅಂದ ಕಂಡರೆ ಇನ್ನೊಂದು ಭಾಗದಲ್ಲಿ ಬಿಯರ್ ಬಾಟಲಿ, ಪ್ಲಾಸ್ಟಿಕ್ ಬಾಟಲಿ, ಬಲೆಗಳು ಹಾಗೂ ಕಸದಿಂದ ತುಂಬಿದ್ದು ಬೀಚ್ ನಲ್ಲಿ ಕಾಲಿಡಲು ಅಸಹ್ಯವಾಗುತ್ತಿದೆ. ಸಂಜೆಯಾಗುತ್ತಲೇ ಈ ಭಾಗದಲ್ಲಿ ಯುವಕರ ತಂಡ ಪಾರ್ಟಿ ನಡೆಸುತ್ತಿದ್ದು, ಬಿಯರ್ ಬಾಟಲಿಗಳನ್ನು ಬೀಚ್ ಬದಿ ಬಿಸಾಡಿ ಹೋಗುತ್ತಿದ್ದಾರೆ.ಇದರಿಂದ ಇಂತಹ ಬಾಟಲಿಗಳು ಸಮುದ್ರಕ್ಕೆ ಸೇರುತ್ತಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಆದಷ್ಟು ಬೇಗ ಬೀಚ್ ಅಭಿವೃದ್ದಿ ಸಮಿತಿ ಈ ಬಗ್ಗೆ ಕಾಳಜಿ ವಹಿಸಿ ಬೀಚ್ ಸ್ವಚ್ಚತೆಯತ್ತ ಗಮನ ಸೆಳೆಯಬೇಕಾಗಿದೆ.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…