ಇತರೆ

ಪರಶುರಾಮ ಪ್ರತಿಮೆಯ ಉಳಿದ ಅರ್ಧಭಾಗ ತೆರವುಗೊಳಿಸುವ ಮೂಲಕ ಕೊನೆಯ ಸಾಕ್ಷ್ಯ ನಾಶ

ಉಡುಪಿ: ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡ ಪರಶುರಾಮ ಪ್ರತಿಮೆಯ ಉಳಿದ ಕಂಚಿನ ಅರ್ಧ ಭಾಗವನ್ನು ತೆರವು ಮಾಡುವ ಪ್ರಯತ್ನ ನಡೆದಿದ್ದು, ಆ ಮೂಲಕ ಹಗರಣಕ್ಕೆ ಸಾಕ್ಷಿಯಾಗಿದ್ದ ಕೊನೆಯ ಸಾಕ್ಷ್ಯವನ್ನು ನಾಶ ಮಾಡುವ ಪ್ರಯತ್ನ ಇದಾಗಿದೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.


ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಕಂಚಿನ ಪ್ರತಿಮೆಯ ಬದಲಿಗೆ ನಕಲಿ ಮೂರ್ತಿ ನಿರ್ಮಿಸಲಾಗಿದೆ. ಕಾರ್ಕಳದ ಶಾಸಕರು ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಬೈಲೂರಿನಲ್ಲಿ ಸುಸಜ್ಜಿತವಾದ ಥೀಮ್ ಪಾರ್ಕ್‌ನ ನಿರ್ಮಾಣವಾಗಬೇಕು. ಪರಶುರಾಮನ ಕಂಚಿನ ಪ್ರತಿಮೆ ಪ್ರತಿಷ್ಠಾಪನೆಗೊಳ್ಳಬೇಕು. ಆದರೆ ಇದಕ್ಕಾಗಿ ಈಗ ಮೂರ್ತಿಯ ನಿರ್ಮಾಣ ಗುತ್ತಿಗೆ ಪಡೆದಿರುವ ಶಿಲ್ಪಿ ಕೃಷ್ಣ ನಾಯಕ್ ಹಾಗೂ ಥೀಮ್ ಪಾರ್ಕ್ ನಿರ್ಮಾಣದ ಗುತ್ತಿಗೆ ಪಡೆದಿರುವ ನಿರ್ಮಿತಿ ಕೇಂದ್ರವನ್ನು ಬದಲಿಸಬೇಕು ಎಂದು ತಾವು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ. ರಾಜ್ಯದ ಅನೇಕ ಕಡೆಗಳಲ್ಲಿರುವ ಕೆಂಪೇಗೌಡ, ಶಿವಾಜಿ, ರಾಣಿ ಚೆನ್ನಮ್ಮ, ಮೈಸೂರು ಒಡೆಯರ್ ಮುಂತಾದವರ ಪ್ರತಿಮೆ ನಿರ್ಮಿಸಿದವರಿಂದ ಪರಶುರಾಮನ ಮೂರ್ತಿ ನಿರ್ಮಿಸಲಿ ಎಂದು ಅವರು ಆಗ್ರಪಡಿಸಿದರು.
ಕಾರ್ಕಳದಲ್ಲಿ ಸುನಿಲ್ ಕುಮಾರ್ ಅವರ ಸರಕಾರ ಅಧಿಕಾರದಲ್ಲಿದೆ. ಜನರಲ್ಲಿ ಕಂಚನ್ನು ಬೇಡಿಯಾದರೂ ಮೂರ್ತಿ ರಚಿಸಿ ಪ್ರತಿಷ್ಠಾಸುವುದಾಗಿ ಸುನಿಲ್ ಹೇಳಿದ್ದಾರೆ. ಹಾಗಾದರೂ ಮಾಡಿ ಮೂರ್ತಿ ನಿರ್ಮಿಸಿ ಪುಣ್ಯವನ್ನು ನೀವೆ ಇಟ್ಟುಕೊಳ್ಳಿ ಎಂದು ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ ಉಪಸ್ಥಿತರಿದ್ದರು

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…

16 mins ago

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…

23 mins ago

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…

30 mins ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…

34 mins ago

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…

37 mins ago

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

1 day ago