ಜನ ಮನದ ನಾಡಿ ಮಿಡಿತ

Advertisement

ಹುಣಸೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸ್ಥಾಪನ ದಿನವನ್ನು ಆಚರಣೆ

ಹುಣಸೂರಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸ್ಥಾಪನ ದಿನದ ಆಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು.

ಹುಣಸೂರಿನ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ ಅವರು ಕನ್ನಡ ಭಾಷೆಗೆ ಮಹಾರಾಜರ ಕಾಲದಿಂದಲೂ ಒಳ್ಳೆಯ ಸ್ಥಾನಮಾನ ಇದ್ದು ಎರಡು ಸಾವಿರ ವರ್ಷದ ಇತಿಹಾಸವಿದೆ ಎಂದರು. ಹಾಗಾಗಿ ಕನ್ನಡ ಭಾಷೆಯನ್ನು ಉಳಿಸಿ, ಬೆಳಸೋಣ ಎಂದರು.
ಇದೆ ವೇಳೆ ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹುಣಸೂರು ತಾಲ್ಲೂಕಿನ ತಿಪ್ಪಲಪುರ ಗ್ರಾಮದ ಎಂ ಲೇಖನ್ , ಸ್ಪೀಕ್ ಫಾರ್ ಇಂಡಿಯಾ ರಾಷ್ರ್ಟಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ಹೆಚ್ ವಿ ಶ್ಯಾಮ್ ಪ್ರಸಾದ್ , ಸ್ನಾತಕೋತ್ತರ ಪದವಿ ಚಿನ್ನದ ಪದಕ, ನಗದು ಬಹುಮಾನ ವಿಜೇತರಾದ ಅಮೃತ ಎಂ ಎ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು,
ಕಾರ್ಯಕ್ರಮದಲ್ಲಿ ತಾಲ್ಲೂಕಿನ ಉಪ ವಿಭಾಗಧಿಕಾರಿ ಮಹಮ್ಮೊದ್ ಹ್ಯಾರಿಸ್ ಸುಮೇರ್ , ಪ್ರಾಂಶುಪಾಲರಾದ ಪುಟ್ಟಶೆಟ್ಟಿ , ಮಂಡಿಕೆರೆ ಗೋಪಾಲ್ , ಹುಣಸೂರು ಕ.ಸಾ.ಪ ಅಧ್ಯಕ್ಷ ಹೆಚ್ ಕೆ ಮಹದೇವ್ , ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ, ನಿವೃತ ಪ್ರಾಂಶುಪಾಲರಾದ ಮೋದೂರು ಮಹೇಶ್, ಚಂದ್ರಶೇಖರ್ , ಸೋಮಶೇಖರ್ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!