ಸರಗೂರು- ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ದೇಶಕಂಡ ಮಹಾನಾಯಕ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿಯನ್ನು ಬಹಳ ಅದ್ದೂರಿಯಾಗಿ ನಡೆಸಲಾಯಿತು.
ಮೊದಲು ಡಾ ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ಆರ್ಚನೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು, ಗ್ರಾಮದ ಪ್ರಮುಖ ಬೀದಿಯಲ್ಲಿ ಬ್ಯಾಂಡ್ ಸೇಟ್, ವಾದ್ಯಗೋಷ್ಠಿಗಳ ಜೊತೆಯಲ್ಲಿ ಮೆರವಣಿಗೆ ಮಾಡಲಾಯಿತು.
ನಂತರ ಮಾತನಾಡಿದ ಗ್ರಾಮದ ಮುಖಂಡ ಶಂಭು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ನಮಗೆ ಸಂವಿಧಾನ ಬರೆದು ನೀಡಿರುವುದು ದೇಶಕ್ಕೆ ಒಂದು ಕೀರ್ತಿ ತಂದಿದೆ ಸಂವಿಧಾನದಿಂದ ಜನರಿಗೆ ಉತ್ತಮ ನ್ಯಾಯ, ಸಾಮಾಜಿಕ ನ್ಯಾಯ ನೀಡುವುದು ನಮ್ಮೆಲ್ಲರ ಹೊಣೆ ಜೊತೆಗೆ ಸಮಾಜದಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ, ಶಿಕ್ಷಣ ಸಿಗಬೇಕೆಂಬ ಕಲ್ಪನೆಯನ್ನು ಹೊಂದಿದ್ದ ಅಂಬೇಡ್ಕರ್ ರವರು ತಮ್ಮ ಜೀವಿತವನ್ನು ಸಮಾಜದಲ್ಲಿ ತುಳಿತಕ್ಕೆ ಒಳಗಾಗಿರುವವರಿಗಾಗಿ ಸಮರ್ಪಣೆ ಮಾಡಿದ್ದರು.
ಸಮಾಜದಲ್ಲಿ ಬದಲಾವಣೆಗಳನ್ನು ಕಾಣಬೇಕಾದರೆ, ಎಲ್ಲಾ ವರ್ಗದ ಜನತೆಗೆ ಸಮಾನತೆ ದೊರೆಯಬೇಕಾದರೆ, ಶಿಕ್ಷಣ, ಸಂಘಟನೆ, ಹೋರಾಟಗಳ ಮೂಲಕ ಸಜ್ಜಾಗಬೇಕು, ಯುವಜನತೆ ಪುಸ್ತಕಗಳನ್ನು ಓದುವಂತಹ ಅಭ್ಯಾಸಗಳನ್ನು ಹೆಚ್ಚಾಗಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಯಾಜಮಾನರಾದ ನಾಗಯ್ಯ, ಶಂಭುಲಿಂಗಯ್ಯ, ಮಾದಯ್ಯ, ನಾಗರಾಜು, ಮಾರಯ್ಯ, ತ್ರಿಶಂಭು, ವಿಜಯ್, ದೊಡ್ಡಯ್ಯ, ನಾಗಯ್ಯ, ಗೋಪಾಲಯ್ಯ, ಕೃಷ್ಣಯ್ಯ, ಸೋಮಯ್ಯ, ಚಲುವರಾಜು, ಮಣಿ, ಸುಂದರ್, ಗೋಪಾಲಯ್ಯ, ವೆಂಕಟೇಶ್, ಮಹೇಂದ್ರ, ಕಾಳರಾಜು, ಚಿನ್ನಯ್ಯ, ಸುರೇಶ್, ಮಂಜು, ಶಂಕರ್, ಬಾಲಕೃಷ್ಣ ಸೇರಿದಂತೆ ಯುವಕರು ಹಾಜರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…