ಬಂಟ್ವಾಳ: ನೀರಿನ ಸಮಸ್ಯೆಯಿಂದ ಕೃಷಿ ನಾಶವಾಗಿದ್ದು, ಮನನೊಂದ ಕೃಷಿಕನೋರ್ವ ಕುಡಿಯಲು ನೀರು ಸೇದುವ ಬಾವಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾವಿನ ವೇಳೆ ನಡೆದಿದೆ.
ಪುತ್ತೂರು ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ನಿವಾಸಿ ಭಾಸ್ಕರ್ ರೈ ( 53) ಆತ್ಮಹತ್ಯೆ ಮಾಡಿದ ವ್ಯಕ್ತಿ.
ಭಾಸ್ಕರ್ ರೈ ಅವರು ಪುದು ಗ್ರಾಮದ ಪೆಲಪಾಡಿ ಎಂಬಲ್ಲಿ ಪತ್ನಿಯ ತಮ್ಮನ ಮನೆಯ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು*….
ಭಾಸ್ಕರ್ ರೈ ಅವರು ಪುತ್ತೂರಿನ ಕೆದಂಬಾಡಿ ಗ್ರಾಮದಲ್ಲಿ ವಾಸವಾಗಿದ್ದು, ಬಂಟ್ವಾಳ ತಾಲೂಕಿನ ಪುದು ಗ್ರಾಮದ ಪೆಲಪಾಡಿಯಿಂದ ಮದುವೆಯಾಗಿದ್ದರು.
ಕೃಷಿಯನ್ನು ನಂಬಿ ಬದುಕುತ್ತಿದ್ದ ಇವರಿಗೆ ಇತ್ತೀಚಿನ ದಿನಗಳಲ್ಲಿ ಕೃಷಿಗೆ ನೀರಿನ ಸಮಸ್ಯೆ ಉಂಟಾಗಿ,ಕೃಷಿಗೆ ಹಾನಿಯಾಗಿತ್ತು.
ಕೃಷಿಯೇ ಮೂಲಾಧಾರವಾಗಿದ್ದ ಇವರಿಗೆ ನೀರಿನ ಸಮಸ್ಯೆಯಿಂದ ಕೃಷಿ ಹಾಳಾದ ಕಾರಣ ಮನನೊಂದಿದ್ದರು.
ಇದರಿಂದ ನಿದ್ರಾಹೀನತೆಗೆ ಒಳಗಾಗಿದ್ದರು.
ಇದೇ ಕಾರಣದಿಂದ ಪತ್ನಿಯ ತಮ್ಮನ ಮನೆ ಪುದುವಿಗೆ ಬಂದಿದ್ದರು. ಅಲ್ಲಿಂದ ನಿದ್ರಾಹೀನತೆ ಸಮಸ್ಯೆಗೆ ಪರಿಹಾರಕ್ಕಾಗಿ ಮಂಗಳೂರಿನ ವೈದ್ಯರ ಬಳಿಗೆ ಚಿಕಿತ್ಸೆಗೆ ತೆರಳಿ ವಾಪಾಸು ಬಾವನ ಮನೆಯಲ್ಲಿ ಉಳಿದುಕೊಂಡಿದ್ದರು.
ರಾತ್ರಿ ಊಟ ಮಾಡಿ ಹಾಲ್ ನಲ್ಲಿ ಮಲಗಿದ್ದು, ಮಧ್ಯ ರಾತ್ರಿ ಇವರು ಮಲಗಿದ್ದಲ್ಲಿ ಇಲ್ಲದೆ ಕಾಣೆಯಾಗಿದ್ದು ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ಬಾವಿಯಲ್ಲಿ ನೀರು ಎಳೆಯಲು ಹಾಕಿರುವ ರಾಟೆಯ ಕಬ್ಬಿಣದ ಕೊಂಡಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಮ್ಮಶುಭಕರ ರೈ ದೂರಿನಲ್ಲಿ ತಿಳಿಸಿದ್ದಾರೆ.
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…