ಬಂಟ್ವಾಳ: ನೀರಿನ ಸಮಸ್ಯೆಯಿಂದ ಕೃಷಿ ನಾಶವಾಗಿದ್ದು, ಮನನೊಂದ ಕೃಷಿಕನೋರ್ವ ಕುಡಿಯಲು ನೀರು ಸೇದುವ ಬಾವಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾವಿನ ವೇಳೆ ನಡೆದಿದೆ.
ಪುತ್ತೂರು ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ನಿವಾಸಿ ಭಾಸ್ಕರ್ ರೈ ( 53) ಆತ್ಮಹತ್ಯೆ ಮಾಡಿದ ವ್ಯಕ್ತಿ.
ಭಾಸ್ಕರ್ ರೈ ಅವರು ಪುದು ಗ್ರಾಮದ ಪೆಲಪಾಡಿ ಎಂಬಲ್ಲಿ ಪತ್ನಿಯ ತಮ್ಮನ ಮನೆಯ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು*….
ಭಾಸ್ಕರ್ ರೈ ಅವರು ಪುತ್ತೂರಿನ ಕೆದಂಬಾಡಿ ಗ್ರಾಮದಲ್ಲಿ ವಾಸವಾಗಿದ್ದು, ಬಂಟ್ವಾಳ ತಾಲೂಕಿನ ಪುದು ಗ್ರಾಮದ ಪೆಲಪಾಡಿಯಿಂದ ಮದುವೆಯಾಗಿದ್ದರು.
ಕೃಷಿಯನ್ನು ನಂಬಿ ಬದುಕುತ್ತಿದ್ದ ಇವರಿಗೆ ಇತ್ತೀಚಿನ ದಿನಗಳಲ್ಲಿ ಕೃಷಿಗೆ ನೀರಿನ ಸಮಸ್ಯೆ ಉಂಟಾಗಿ,ಕೃಷಿಗೆ ಹಾನಿಯಾಗಿತ್ತು.
ಕೃಷಿಯೇ ಮೂಲಾಧಾರವಾಗಿದ್ದ ಇವರಿಗೆ ನೀರಿನ ಸಮಸ್ಯೆಯಿಂದ ಕೃಷಿ ಹಾಳಾದ ಕಾರಣ ಮನನೊಂದಿದ್ದರು.
ಇದರಿಂದ ನಿದ್ರಾಹೀನತೆಗೆ ಒಳಗಾಗಿದ್ದರು.
ಇದೇ ಕಾರಣದಿಂದ ಪತ್ನಿಯ ತಮ್ಮನ ಮನೆ ಪುದುವಿಗೆ ಬಂದಿದ್ದರು. ಅಲ್ಲಿಂದ ನಿದ್ರಾಹೀನತೆ ಸಮಸ್ಯೆಗೆ ಪರಿಹಾರಕ್ಕಾಗಿ ಮಂಗಳೂರಿನ ವೈದ್ಯರ ಬಳಿಗೆ ಚಿಕಿತ್ಸೆಗೆ ತೆರಳಿ ವಾಪಾಸು ಬಾವನ ಮನೆಯಲ್ಲಿ ಉಳಿದುಕೊಂಡಿದ್ದರು.
ರಾತ್ರಿ ಊಟ ಮಾಡಿ ಹಾಲ್ ನಲ್ಲಿ ಮಲಗಿದ್ದು, ಮಧ್ಯ ರಾತ್ರಿ ಇವರು ಮಲಗಿದ್ದಲ್ಲಿ ಇಲ್ಲದೆ ಕಾಣೆಯಾಗಿದ್ದು ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ಬಾವಿಯಲ್ಲಿ ನೀರು ಎಳೆಯಲು ಹಾಕಿರುವ ರಾಟೆಯ ಕಬ್ಬಿಣದ ಕೊಂಡಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಮ್ಮಶುಭಕರ ರೈ ದೂರಿನಲ್ಲಿ ತಿಳಿಸಿದ್ದಾರೆ.
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…