ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್ ವಿತರಿಸಲು ఎటివిఎం ಪಾಲಕ್ಕಾಡ್ ವಿಭಾಗ ಯೋಜನೆ: ಸಹಾಯಕರ ನಿಯೋಜನೆಗೆ ಸಿದ್ಧತೆ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಕಾದಿರಿಸದ ಟಿಕೆಟ್‌ಗಳನ್ನು ಸ್ವಯಂಚಾಲಿತ 43883 ಯಂತ್ರ(ಎಟಿವಿಎಂ) ಅಳವಡಿಸಲಾಗಿದೆ. ಇದರಲ್ಲಿ ಈ ಹಿಂದೆಸಹಾಯಕರನ್ನು ನಿಯೋಜಿಸಿ ಟಿಕೆಟ್‌ಗಳನ್ನು ವಿತರಿಸಲಾಗು ತ್ತಿದ್ದರೂ ಕೋವಿಡ್ ಅವಧಿಯಲ್ಲಿ ಈ ಸೇವೆ ರದ್ದುಗೊಂಡಿತ್ತು.

ಕಷ್ಟವಾಗಿರುವುದರಿಂದ ಬಹುತೇಕ ಮಂದಿ ಕೌಂಟರ್‌ಗಳಿಂದಲೇ ಪಡೆದು ಪ್ರಯಾಣಿಸುತ್ತಿದ್ದಾರೆ. ಇದೀಗ ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ಈ ಯಂತ್ರದ ಗರಿಷ್ಠ ಪ್ರಮಾಣದಲ್ಲಿ ಬಳಕೆಯಾಗಬೇಕು ಎನ್ನುವ ಉದ್ದೇಶದಿಂದ ಸಹಾಯಕರನ್ನು ನಿಯೋಜಿಸಿ ಟಿಕೆಟ್ ವಿತರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದೆ. ಅದರಂತೆ ಮೊದಲ ಹಂತದಲ್ಲಿ ಎಟಿವಿಎಂ ಇರುವ ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಮತ್ತು ಕಾಸರಗೋಡು ಸಹಿತ ವಿಭಾಗ ವ್ಯಾಪ್ತಿಗೆ 300 ಸಹಾಯಕರನ್ನು ನಿಯೋಜಿಸಲು ಮುಂದಾಗಿದೆ.

ಪ್ರತಿದಿನ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ 8 ಲಕ್ಷ ರೂ. ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ 2 ಲಕ್ಷ ರೂ. ಮೌಲ್ಯದ ಕಾದಿರಿಸದ ಟಿಕೆಟ್ ವಿತರಣೆ ಆಗುತ್ತಿದೆ. ಇನ್ನು ಮುಂದೆ ಇದನ್ನು ಸಂಪೂರ್ಣವಾಗಿ ಎಟಿವಿಎಂ ಮೂಲಕವೇ ವಿತರಿಸುವುದು ಇಲಾಖೆಯ ಗುರಿ. ಮಂಗಳೂರು ಸೆಂಟ್ರಲ್‌ಗೆ 21 ಮತ್ತು ಜಂಕ್ಷನ್‌ಗೆ 9 ಸಿಬಂದಿ ನಿಯೋಜಿಸಲು ಉದ್ದೇಶಿಸಲಾಗಿದ್ದು, ದಿನದ 24 ಗಂಟೆಯೂ ಪ್ರಯಾಣಿಕರಿಗೆ ಈ ಸೇವೆ ದೊರೆಯಲಿದೆ.

ಒಂದು ವರ್ಷದ ಒಪ್ಪಂದದ ಆಧಾರದಲ್ಲಿ ಸಹಾಯಕರ ನೇಮಕಾತಿ ನಡೆಯಲಿದ್ದು, ಇವರು ರೈಲ್ವೇ ಇಲಾಖೆಯ ನೌಕರರಲ್ಲ. ಟಿಕೆಟ್ ಮಾರಾಟದ ಮೇಲಿನ ಕಮಿಷನ್ ಆಧಾರದಲ್ಲಿ ಈ ಸಹಾಯಕರ ಆದಾಯ ಪಡೆಯಲಿದ್ದಾರೆ. ಇದಕ್ಕಾಗಿ ರೈಲ್ವೇ ಅರ್ಜಿ ಆಹ್ವಾನಿಸಿದ್ದು, http://www.sr.indianrailways.gov.in ನಲ್ಲಿ ಅರ್ಜಿ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. 18 ವರ್ಷ ಮೇಲ್ಪಟ್ಟ ಎಸೆಸೆಲ್ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 24 ಕೊನೇ ದಿನಾಂಕ ಎಂದು ರೈಲ್ವೇ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!