ಜನ ಮನದ ನಾಡಿ ಮಿಡಿತ

Advertisement

ಈ ತೋಡಿನಿಂದ ರೋಗಗಳು ಬರುವುದಂತೂ ಪಕ್ಕಾ…..!

ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಿತ್ತುಲ್ ಪ್ರದೇಶದಲ್ಲಿ ಮಳೆ ನೀರು ಹರಿಯುವ ತೋಡಿನಲ್ಲಿ ಕೊಳಚೆ ನೀರು ಹರಿದು ಬರುತ್ತಿದ್ದು ಸ್ಥಳೀಯ ಪರಿಸರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಕಿನ್ನಿಗೋಳಿ ಪೇಟೆಯ ಅಂಗಡಿ ಪ್ಲ್ಯಾಟ್ ಗಳು ಹೋಟೆಲ್ ಬಾರ್ ಗಳ ಕಕ್ಕಾಸು ತ್ಯಾಜ್ಯ ನೀರು, ಡ್ರೈನೇಜ್ ನೀರನ್ನು ಸಂಸ್ಕರಿಸದೆ, ಮಳೆ ನೀರು ಹಾದು ಹೋಗುವ ಒಳಚರಂಡಿಗೆ ಬಿಡಲಾಗುತ್ತಿದೆ.

ಮಳೆ ನೀರು ಹಾದುಹೋಗುವ ತೋಡಿನಲ್ಲಿ ಈ ತ್ಯಾಜ್ಯ ನೀರು ಹರಿದು ಹೋಗುತ್ತಿದ್ದು, ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಾವಿಗಳಿಗೆ ಈ ಕೊಳಚೆ ನೀರು ಸೇರುತ್ತಿದೆ, ಹಲವಾರು ಸಮಯದಿಂದ ಇಲ್ಲಿ ಕೊಳಚೆ ಕಕ್ಕಾಸು ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು, ಈ ಸಮಸ್ಯೆಯನ್ನ ಸರಿಯಾದ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಮುಕ್ತಿ ಕಾಣಿಸದೆ ಇರುವುದು ಸ್ಥಳೀಯ ಆಡಳಿತದ ಕಾರ್ಯವೈಖರಿಯನ್ನ ಅಣಕಿಸುವಂತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನ ಹರಿಸಿ ಸಮಸ್ಯೆಗೆ ಮುಕ್ತಿ ಕಾಣಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯರು ರೋಗರುಜಿನಗಳಿಂದ ಬಳಲುವಂತಾಗಬಹುದು. ಈ ನಿಟ್ಟಿನಲ್ಲಿ ಅರೋಗ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!