ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಿತ್ತುಲ್ ಪ್ರದೇಶದಲ್ಲಿ ಮಳೆ ನೀರು ಹರಿಯುವ ತೋಡಿನಲ್ಲಿ ಕೊಳಚೆ ನೀರು ಹರಿದು ಬರುತ್ತಿದ್ದು ಸ್ಥಳೀಯ ಪರಿಸರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಕಿನ್ನಿಗೋಳಿ ಪೇಟೆಯ ಅಂಗಡಿ ಪ್ಲ್ಯಾಟ್ ಗಳು ಹೋಟೆಲ್ ಬಾರ್ ಗಳ ಕಕ್ಕಾಸು ತ್ಯಾಜ್ಯ ನೀರು, ಡ್ರೈನೇಜ್ ನೀರನ್ನು ಸಂಸ್ಕರಿಸದೆ, ಮಳೆ ನೀರು ಹಾದು ಹೋಗುವ ಒಳಚರಂಡಿಗೆ ಬಿಡಲಾಗುತ್ತಿದೆ.
ಮಳೆ ನೀರು ಹಾದುಹೋಗುವ ತೋಡಿನಲ್ಲಿ ಈ ತ್ಯಾಜ್ಯ ನೀರು ಹರಿದು ಹೋಗುತ್ತಿದ್ದು, ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಾವಿಗಳಿಗೆ ಈ ಕೊಳಚೆ ನೀರು ಸೇರುತ್ತಿದೆ, ಹಲವಾರು ಸಮಯದಿಂದ ಇಲ್ಲಿ ಕೊಳಚೆ ಕಕ್ಕಾಸು ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು, ಈ ಸಮಸ್ಯೆಯನ್ನ ಸರಿಯಾದ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಮುಕ್ತಿ ಕಾಣಿಸದೆ ಇರುವುದು ಸ್ಥಳೀಯ ಆಡಳಿತದ ಕಾರ್ಯವೈಖರಿಯನ್ನ ಅಣಕಿಸುವಂತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನ ಹರಿಸಿ ಸಮಸ್ಯೆಗೆ ಮುಕ್ತಿ ಕಾಣಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯರು ರೋಗರುಜಿನಗಳಿಂದ ಬಳಲುವಂತಾಗಬಹುದು. ಈ ನಿಟ್ಟಿನಲ್ಲಿ ಅರೋಗ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…