ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಿತ್ತುಲ್ ಪ್ರದೇಶದಲ್ಲಿ ಮಳೆ ನೀರು ಹರಿಯುವ ತೋಡಿನಲ್ಲಿ ಕೊಳಚೆ ನೀರು ಹರಿದು ಬರುತ್ತಿದ್ದು ಸ್ಥಳೀಯ ಪರಿಸರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಕಿನ್ನಿಗೋಳಿ ಪೇಟೆಯ ಅಂಗಡಿ ಪ್ಲ್ಯಾಟ್ ಗಳು ಹೋಟೆಲ್ ಬಾರ್ ಗಳ ಕಕ್ಕಾಸು ತ್ಯಾಜ್ಯ ನೀರು, ಡ್ರೈನೇಜ್ ನೀರನ್ನು ಸಂಸ್ಕರಿಸದೆ, ಮಳೆ ನೀರು ಹಾದು ಹೋಗುವ ಒಳಚರಂಡಿಗೆ ಬಿಡಲಾಗುತ್ತಿದೆ.
ಮಳೆ ನೀರು ಹಾದುಹೋಗುವ ತೋಡಿನಲ್ಲಿ ಈ ತ್ಯಾಜ್ಯ ನೀರು ಹರಿದು ಹೋಗುತ್ತಿದ್ದು, ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಾವಿಗಳಿಗೆ ಈ ಕೊಳಚೆ ನೀರು ಸೇರುತ್ತಿದೆ, ಹಲವಾರು ಸಮಯದಿಂದ ಇಲ್ಲಿ ಕೊಳಚೆ ಕಕ್ಕಾಸು ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು, ಈ ಸಮಸ್ಯೆಯನ್ನ ಸರಿಯಾದ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಮುಕ್ತಿ ಕಾಣಿಸದೆ ಇರುವುದು ಸ್ಥಳೀಯ ಆಡಳಿತದ ಕಾರ್ಯವೈಖರಿಯನ್ನ ಅಣಕಿಸುವಂತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನ ಹರಿಸಿ ಸಮಸ್ಯೆಗೆ ಮುಕ್ತಿ ಕಾಣಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯರು ರೋಗರುಜಿನಗಳಿಂದ ಬಳಲುವಂತಾಗಬಹುದು. ಈ ನಿಟ್ಟಿನಲ್ಲಿ ಅರೋಗ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…