ರಾಷ್ಟ್ರ

ಮೋದಿ ಉಪನಾಮೆ ಪ್ರಕರಣ: ಇಂದು ರಾಹುಲ್ ಮೇಲ್ಮನವಿ ಅರ್ಜಿ ತೀರ್ಪು ಪ್ರಕಟಿಸಲಿರುವ ಗುಜರಾತ್ ಹೈಕೋರ್ಟ್

ಅಹಮದಾಬಾದ್ : ಮೋದಿ ಉಪನಾಮೆಯ ಕುರಿತ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ತಮಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ಕುರಿತು ಇಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಲಿದೆ.ಗುರುವಾರ ಹೈಕೋರ್ಟ್ ನೀಡಿದ ಮಾಹಿತಿ ಪ್ರಕಾರ, ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ನೇತೃತ್ವದ ಪೀಠವು ಇಂದು ಬೆಳಗ್ಗೆ11:00 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ಹಿಂದೆ ರಾಹುಲ್‌ ಅವರಿಗೆ ಪ್ರಕರಣದಲ್ಲಿ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ್ದ ನ್ಯಾಯಾಲಯ, ಅವರ ಅರ್ಜಿಯನ್ನು ಪರಿಶೀಲನೆಗಾಗಿ ಕಾಯ್ದಿರಿಸಿತ್ತು. ಇದೀಗ, ರಾಹುಲ್ ಗಾಂಧಿ ಅವರ ಅಪರಾಧ ನಿರ್ಣಯಕ್ಕೆ ನ್ಯಾಯಾಲಯವು ತಡೆಯಾಜ್ಞೆ ನೀಡಿದರೆ, ಲೋಕಸಭೆ ಸದಸ್ಯತ್ವದಿಂದ ಅವರ ಅನರ್ಹತೆಯನ್ನು ರದ್ದುಗೊಳಿಸಬಹುದು. ಒಂದು ವೇಳೆ ಅಮಾನತಿಗೆ ತಡೆ ನೀಡದಿದ್ದರೆ, ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್‌ನ ಉನ್ನತ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವ ಆಯ್ಕೆ ಹೊಂದಿರುತ್ತಾರೆ.ಕಳೆದ ಮೇ ತಿಂಗಳಲ್ಲಿ ರಾಹುಲ್ ಗಾಂಧಿಯವರ ಮನವಿ ಆಲಿಸುವಾಗ ನ್ಯಾ. ಪ್ರಚ್ಚಕ್, ಬೇಸಿಗೆ ರಜೆಯ ನಂತರ ಅಂತಿಮ ಆದೇಶವನ್ನು ನೀಡುವುದಾಗಿ ಹೇಳಿ ಯಾವುದೇ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ್ದರು. ಭಾರತೀಯ ಜನತಾ ಪಕ್ಷದ ಶಾಸಕ ಪೂರ್ಣೇಶ್ ಮೋದಿ ಅವರು 2019ರಲ್ಲಿ ಸಲ್ಲಿಸಿದ್ದ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ದೋಷಾರೋಪಣೆ ಮಾಡಿದ ನಂತರ ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗೆ ಮಾರ್ಚ್ 23ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಈ ತೀರ್ಪಿನ ನಂತರ ಕೇರಳದ ವಯನಾಡಿನಿಂದ ಲೋಕಸಭೆಗೆ ಚುನಾಯಿತರಾದ ರಾಹುಲ್ ಗಾಂಧಿ ಅವರನ್ನು ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿತ್ತು. ಈ ಆದೇಶ ಪ್ರಶ್ನಿಸಿದ ರಾಹುಲ್, ಸೂರತ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 20ರಂದು ಜಾಮೀನು ನೀಡುವಾಗ ನ್ಯಾಯಾಲಯವು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿತ್ತು.ಪ್ರಕರಣದ ಹಿನ್ನೆಲೆ : ಏಪ್ರಿಲ್ 13, 2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಉಪನಾಮೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. “ಎಲ್ಲ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮೆ ಹೊಂದಿದ್ದಾರೆ” ಎಂದು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸೂರತ್ ಪಶ್ಚಿಮ ಕ್ಷೇತ್ರದ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಮನೆಯಲ್ಲಿ ಒಂಟಿಯಾಗಿದ್ದ 82 ವರ್ಷದ ವೃದ್ಧೆಯ ಚಿನ್ನದ ಬಳೆ ದೋಚಿ ಪರಾರಿ..!

ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ…

9 hours ago

ಮಂಗಳೂರು: ಆಗಸ್ಟ್ 19ರಂದು ‘ಕನಸ ಯುವರಾಣಿ’ ಮ್ಯೂಸಿಕಲ್ ವಿಡಿಯೋ ಸಾಂಗ್ ಬಿಡುಗಡೆ

ಅಮ್ಮಾ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಕನಸ ಯುವರಾಣಿ’ ತುಳು ಹಾಗೂ ಕನ್ನಡ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು…

9 hours ago

ಮಂಗಳೂರು: ಮಂಗಳೂರಿನ ಕೆಎಫ್‌ಸಿಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್‌ವೊಂದರಲ್ಲಿರುವ ಕೆಎಫ್‌ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ…

9 hours ago

ಬಂಟ್ವಾಳ: ಹಾಸನ-ಮಂಗಳೂರು ಮಾರ್ಗದಲ್ಲಿ ಮಾದಕವಸ್ತು ಸಾಗಾಟ; ಓರ್ವ ಬಂಧನ

ಹಾಸನದಿಂದ ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯ…

9 hours ago

ಸೂರಿಕುಮೇರು: ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ…!

ಸೂರಿಕುಮೇರು ಸಮೀಪದ ದಾಸಕೋಡಿ ಕ್ರಾಸಿಂಗ್ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ…

9 hours ago

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು…

2 days ago