ಜನ ಮನದ ನಾಡಿ ಮಿಡಿತ

Advertisement

ಕರಾವಳಿಯ ನಟಿ, ಈಗ ಕನ್ನಡದ ಮಹಾನಟಿ, ಕನ್ನಡಿಗರ ಮನೆ ಮಗಳಾಗಿದ್ದಾಳೆ ಆರಾಧನಾ ಭಟ್ ಎಂಬ ನಿರೂಪಕಿ …

ದಕ್ಷಿಣ ಕನ್ನಡ : ಜೀ ಕನ್ನಡ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ “ಮಹಾನಟಿ” ರಿಯಾಲಿಟಿ ಶೋ ದಲ್ಲಿ,ಮೂಡಬಿದ್ರೆ ಸಮೀಪದ ನಿಡ್ಡೋಡಿಯ ಆರಾಧನಾ ಭಟ್ ಉತ್ತಮ ಪ್ರದರ್ಶನ ನೀಡಿ ಕರ್ನಾಟಕದ ಮನೆಮಾತಾಗಿದ್ದಾರೆ, ಕರಾವಳಿಯ ಮನೆಮಗಳಾದ ಆರಾಧನಾ ಭಟ್ ಈಗ ನಾಡಿನಾದ್ಯಂತ ಎಲ್ಲರ ಮೆಚ್ಚುಗೆ ಪಾತ್ರವಾಗಿ ಭೇಷ್ ಎನಿಸಿಕೊಂಡಿದ್ದಾರೆ.


ಜೀ ಕನ್ನಡದ” ಮಹಾನಟಿ” ವಿನೂತನ ರಿಯಾಲಿಟಿ ಶೋ ಕಾರ್ಯಕ್ರಮ ನಾಡಿನಾದ್ಯಂತ ಜನಮನ್ನಣೆ ಗಳಿಸಿದ್ದು, ಕಾರ್ಯಕ್ರಮ ಆರಂಭಕ್ಕೂ ಮುನ್ನ ನಡೆದ ಆಡಿಷನ್ನಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕ ಮಾತ್ರ ಪ್ರತಿಭೆ ಆರಾಧನಾ ಭಟ್ರ ಸಾಧನೆಗಾಗಿ ಜೀ ಕನ್ನಡ ದೃಶ್ಯಮಾಧ್ಯಮ ಬೆಂಗಳೂರಿನ ಗಾಂಧಿನಗರದಲ್ಲಿ ಬೃಹತ್ ಕಟೌಟ್ ಅಳವಡಿಸಿ ಪ್ರೋತ್ಸಾಹಿಸುವುದರ ಮೂಲಕ ಅಭಿನಂದಿಸಿದ್ದಾರೆ.

ಇವರು ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಲಿಕೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿ, ಅಲ್ಲಿಯೂ ಸೈ ಎನಿಸಿಕೊಂಡು, ಆಳ್ವಾಸ್ ಸಂಸ್ಥೆಯ ಮುಖ್ಯಸ್ಥರು ಮತ್ತು ಬೋಧಕ ಶಿಕ್ಷಕರಿಂದ, ಮತ್ತು ಇತರ ನೌಕರರಿಂದ ಅಲ್ಲದೆ ಸಹಪಾಠಿ ವಿದ್ಯಾರ್ಥಿಗಳಿಂದ ಪ್ರಶಂಸೆಗೆ ಪಾತ್ರರಾದ ಕರಾವಳಿ ಮನೆಮಗಳು ಆರಾಧನಾ, ಹಲವಾರು ದೊಡ್ಡ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ, ಆಳ್ವಾಸ್ ನುಡಿಸಿರಿ, ಆಳ್ವಾಸ್ ವಿರಾಸತ್ ನಂತಹ ಬೃಹತ್ ವೇದಿಕೆಗಳಲ್ಲಿ ಕಾರ್ಯಕ್ರಮ ನಿರೂಪಕಿಯಾಗಿ ಜೂನಿಯರ್ ಅನುಶ್ರೀ ಎಂದು ಆರಾಧನಾ ಹೆಸರುವಾಸಿಯಾಗಿದ್ದಾರೆ, ಪ್ರಸ್ತುತ ಮಹಾನಟಿ ಕಾರ್ಯಕ್ರಮದಲ್ಲಿ ಸ್ವತಹ ಅನುಶ್ರೀ ಇದನ್ನು ಒಪ್ಪಿಕೊಂಡಿದ್ದಾರೆ.


ಮಹಾನಟಿ ಕಾರ್ಯಕ್ರಮದ ಜಡ್ಜಸ್ ಗಳಿಂದ ಪ್ರಶಂಸೆಗೆ ಪಾತ್ರರಾಗಿರುವ ಆರಾಧನಾರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವರು, ಪ್ರಾಂಶುಪಾಲರಾದ ಕುರಿಯನ್, ವಿವೇಕ್ ಆಳ್ವರು ನಿರಂತರ ಪ್ರೋತ್ಸಾಹ ನೀಡುತ್ತಿದ್ದು, ಸಾಧನೆಗಾಗಿ ಅಭಿನಂದಿಸಿದ್ದಾರೆ
ಮಜಾ ಭಾರತ ಖ್ಯಾತಿಯ ಆರಾಧನಾ ಭಟ್ಟರು ಮತ್ತು ತಾಯಿ ಪದ್ಮಶ್ರೀ ಭಟ್ ಜೊತೆಗೂಡಿ ಆರದಿರಲಿ ಬದುಕು ಮತ್ತು ವಾಯ್ಸ್ ಆಫ್ ಆರಾಧನಾ ಎಂಬ ಸ್ವತಂತ್ರ ಸಂಸ್ಥೆಯನ್ನು ಸಮಾನ ಮನಸ್ಕರೊಂದಿಗೆ ಕೆಲವು ವರ್ಷಗಳ ಹಿಂದೆ ಆರಂಭಿಸಿ, ಬಡ ಅನಾರೋಗ್ಯ ಪೀಡಿತರ ಪಾಲಿನ ಆರಾಧ್ಯರಾಗಿದ್ದಾರೆ, ತಮ್ಮ ಸಂಸ್ಥೆಯಿಂದ ನೀಡುವ ಸರ್ಕಾರಿ ಶಾಲಾ ಯೋಜನೆಯಲ್ಲಿ, ಶಾಲೆಗೆ ಬೇಕಾದ ಪರಿಕರಗಳನ್ನು, ಮುಖ್ಯಸ್ಥರೊಂದಿಗೆ ಚರ್ಚಿಸಿ ನೀಡುತ್ತಾ ಬಂದಿದ್ದು ಇವರ ಈ ಎಲ್ಲ ಸಾಮಾಜಿಕ ಕಳಕಳಿ ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ, ಅಲ್ಲದೆ ಸಾಂಸ್ಕೃತಿಕವಾಗಿ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಅವಕಾಶ ನೀಡಿ, ಪ್ರೋತ್ಸಾಹಿಸಿ ಈಗ ಅದೆಷ್ಟೋ ಪ್ರತಿಭೆಗಳು ರಾಜ್ಯ ರಾಷ್ಟ್ರ ಮಟ್ಟದಲ್ಲಿ ಉತ್ತಮ ಹೆಸರು ಗಳಿಸಿದ್ದು, ಪೋಷಕರ ಪಾಲಿನ ಆಶಾಕಿರಣವಾಗಿದ್ದಾರೆ.


ಆರಾಧನಾ ಭಟ್ಟರ ಈ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕೆಲಸಗಳನ್ನು ಗುರುತಿಸಿ ಹಲವಾರು ಪ್ರಶಸ್ತಿ ಸನ್ಮಾನಗಳು ದೊರಕಿದೆ
ಪ್ರಸ್ತುತ ಮಹಾನಟಿ ಕಾರ್ಯಕ್ರಮದಲ್ಲಿ ಆರಾಧನಾ ಉತ್ತಮ ಪ್ರದರ್ಶನ ನೀಡುತ್ತಿದ್ದು, ಕರಾವಳಿಯ ಈ ಬೆಡಗಿ ಮುಂದೆ ಹೆಸರಾಂತ ಚಲನಚಿತ್ರ ನಟಿಯಾಗಲಿ ಎಂಬುದು ನಮ್ಮೆಲ್ಲರ ಹಾರೈಕೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!