ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ ಎನ್ 623 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾಳೆ.
ಫಲಿತಾಂಶ ತಿಳಿಯುತ್ತಿದ್ದಂತೆ ಶಾಲೆಯ ಮುಖ್ಯೋಪಾಧ್ಯಾಯನಿ ಉಷಾ ಸಹನಾಗೆ ಸಿಹಿ ತಿನ್ನಿಸಿ ಶುಭ ಕೋರಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಸಹನಾ, 623 ಅಂಕ ಪಡೆದಿದ್ದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಪೋಷಕರು ಶಿಕ್ಷಕರ ಪ್ರೋತ್ಸಾಹದಿಂದ ಈ ಅಂಕ ಪಡೆಯಲು ಸಾಧ್ಯವಾಗಿದೆ. ಶಾಲೆಯಲ್ಲಿ ನಿರಂತರ ಪರೀಕ್ಷೆಗಳನ್ನು ಮಾಡುತ್ತಿದ್ದರು. ಹಳೆ ಪ್ರಶ್ನೆ ಪತ್ರಿಕೆಗಳ ರಿವಿಜನ್ ಮಾಡಿಸುತ್ತಿದ್ದರು. ತಜ್ಞ, ತರಬೇತುದಾರರ ಮೂಲಕ ಕೋಚಿಂಗ್ ಕೊಡಿಸುತ್ತಿದ್ದರು. ನಿರಂತರ ಓದಿಗೆ, ಏಕಾಗ್ರತೆಗೆ ಆದ್ಯತೆ ನೀಡುತ್ತಿದ್ದರು. ನನ್ನ ಜೀವನದಲ್ಲಿ ತಂದೆ ತಾಯಿಯ ಪಾತ್ರ ದೊಡ್ಡದು. ಶಾಲಾ ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿಗೆ ಧನ್ಯವಾದ ಎಂದಿದ್ದಾರೆ.
ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೋಷಕರು ಮತ್ತು ಶಿಕ್ಷಕರು ಪೂರ್ಣ ಬೆಂಬಲ ನೀಡಬೇಕು ಎಂದು ಹೇಳಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…