ಮಂಗಳೂರು, ಮೇ.9;ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡ ಕರೆಯವರಿಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡುತ್ತಿದ್ದರು.
ಮಾಧ್ಯಮ ಗಳು ಪರಂಪರೆಯ ಕೊಂಡಿ ಯಾಗಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರ್ಯ ನಿರ್ವಹಿಸು ತ್ತಾ ಬಂದಿದೆ. ಮಂಗಳೂರು ವಿಶ್ವ ವಿದ್ಯಾನಿಲ ಯದ ಬೆಳವಣೆಗೆಯಲ್ಲಿ ಮಹತ್ವದ ಪಾತ್ರವಹಿಸಿದೆ.ಯುವ ಜನರಲ್ಲಿ ಕಲಿಕೆಯ ಬಗ್ಗೆ ಇರುವ ನಿರಾಸಕ್ತಿಯನ್ನು ದೂರ ಮಾಡಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಮಾಧ್ಯಮ ಗಳು ಪದ ಬಳಕೆಯ ಬಗ್ಗೆ ಎಚ್ಚರಿಕೆ ವಹಿಸಬೇಕು.ಸಮಾಜದಲ್ಲಿನ ವಿಕೃತಿಗಳನ್ನು ಮೀರಿ ಮಾಧ್ಯಮಗಳು ಸಮಾಜದ ಉತ್ತಮ ಭವಿಷ್ಯ ವನ್ನು ರೂಪಿಸುವ ಶಕ್ತಿ ಯನ್ನು ಹೊಂದಿದೆ ಈ ನಿಟ್ಟಿನಲ್ಲಿ ಮಾಧ್ಯಮಗಳು ಗಮನಹರಿಸಲು ಮನವಿ ಮಾಡುವುದಾಗಿ ಪ್ರೊ.ಪಿ. ಎಲ್.ಧರ್ಮ ತಿಳಿಸಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಹಿರಿಯ ಪತ್ರಕರ್ತ ದಿವಂಗತ ಪದ್ಯಾಣ ಗೋಪಾಲಕೃಷ್ಣರ ಒಡನಾಟದ ಬಗ್ಗೆ ಮಾತನಾಡಿ ಪತ್ರಕರ್ತರು ವರ್ತಮಾನ ಕಾಲದಲ್ಲಿದ್ದು ಭೂತಕಾಲದ ಜ್ಞಾನದೊಂದಿಗೆ ಭವಿಷ್ಯದ ಚಿಂತನೆ ಹೊಂದಿರಬೇಕಾದ ಅಗತ್ಯವಿದೆ ಎಂದರು. ಪ.ಗೋ ಪ್ರಶಸ್ತಿ ವಿಜೇತ ವಾರ್ತಾಭಾರತಿ ಪತ್ರಿಕೆಯ ವಿಶೇಷ ವರದಿಗಾರ ಇಸ್ಮಾಯಿಲ್ ಕಂಡಕೆರೆ ಮಾತನಾಡುತ್ತಾ,ಪತ್ರಿಕೆ ಗಳು ಗ್ರಾಮೀಣ ಪ್ರದೇಶದ ಸಮಸ್ಯೆ ಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕಾದ ಅಗತ್ಯವಿದೆಎಂದವರು ವಿವರಿಸಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆವಹಿಸಿದ್ದರು.
ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ ಬಂಟ್ವಾಳ,ಪದ್ಯಾಣ ಗೋಪಾಲಕೃಷ್ಣರವರ ಪುತ್ರ ವಿಶ್ವೇಶ್ವರ ಭಟ್ ,ಮ್ಯಾಮ್ ನ ಗೌರವಾಧ್ಯಕ್ಷ ವೇಣು ಶರ್ಮ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ,ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ,ಹರ್ಷ ಮೊದಲಾದ ವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…