ಮುಲ್ಕಿ: ಗ್ರಾಮೀಣ ಪ್ರದೇಶದ ಅತಿಕಾರಿಬೆಟ್ಟು ವಿನ ಪಂಜಿನಡ್ಕ ಕೆಪಿಎಸ್ಕೆ ಸ್ಮಾರಕ ಅನುದಾನಿತ ಪ್ರೌಢಶಾಲೆಯು ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಅಧ್ಯಾಪಕರ ತಂಡ ಅತ್ಯಂತ ಕ್ರೀಯಾಶೀಲವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಿ ಗ್ರಾಮೀಣ ಪ್ರದೇಶದಲ್ಲಿ ಒಂದು ಮಾದರಿ ಶಾಲೆಯಾಗಿ ಹೆಸರು ಗಳಿಸಿದೆ, ಸುಮಾರು ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ಶಾಲಾ ವಿದ್ಯಾರ್ಥಿಗಳಲ್ಲದೆ ಬೇರೆ ಶಾಲೆಯ ವಿದ್ಯಾರ್ಥಿಗಳ ಹಾಗೂ ಮುಂಬೈ ವಿದ್ಯಾರ್ಥಿಗಳು ಸೇರಿ 45 ವಿದ್ಯಾರ್ಥಿಗಳು ಬಾಗವಹಿಸಿದ್ದರು.
ಶಾಲೆಯಲ್ಲಿ ಮುಖ್ಯ ಕಲಾ ಶಿಕ್ಷಕರಾಗಿರುವ ವೆಂಕಿ ಫಲಿಮಾರ್ ರವರು ಶಿಬಿರದಲ್ಲಿ ಮುಖ್ಯವಾಗಿ ಮಕ್ಕಳಿಗೆ ಪೇಪರ್ ಕ್ರಾಪ್ಟ್, ಅವೆ ಮಣ್ಣಿನ ಕಲಾಕೃತಿ ರಚಿಸುವ ಬಗ್ಗೆ ಮಾಹಿತಿ ನೀಡಿದ್ದು ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಶ್ಲೋಕ, ಭಾರತೀಯ ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿ ಹೇಳಲಾಗಿದೆ.
ಕಲಾಕೃತಿಗಳಲ್ಲಿ ಮುಖ್ಯವಾಗಿ ಹಳೆಯ ಬಾಟಲ್ ವಿವಿಧ ಬಣ್ಣಗಳಿಂದ, ಹೂವಿನ ಚಿತ್ರಗಳಿಂದ ಆಕರ್ಷಿಣೀಯವಾದರೆ, ಹಾಳಾದ ತೆಂಗಿನ ಕಾಯಿ ಮತ್ತು ಗೆರಟೆ ಒಂದು ಮನುಷ್ಯನನ್ನು ಹೋಲುವ ರೂಪ ಪಡೆದಿದೆ, ಹಳೆಯ ಪೇಪರ್ ಬುಲೆಟ್ ನ ಪ್ರತಿಕೃತಿ ಹೊಂದಿದರೆ, ಹಳೆಯ ರಟ್ಟು ರಕ್ಕಸನ ರೂಪ ಪಡೆದಿದೆ, ಸ್ಪಂಜ್ ವಿವಿಧ ಗೊಂಬೆಯ ರೂಪ ಪಡೆದು ಆಕರ್ಷಣೀಯ ಅಲ್ಲದೆ ಮಕ್ಕಳಿಗೆ ಶ್ಲೋಕ ಪಾಠ, ಪ್ರಾಣಯಾಮ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಯಿತು.
ಸರಕಾರಿ ಶಾಲೆಗಳೂ ಮುಚ್ಚುತ್ತಾ ಬಂದರೂ ಈ ಅನುದಾನಿತ ಶಾಲೆಯನ್ನು ಶಾಲಾ ಆಡಳಿತ ಮಂಡಳಿ ಹಳೆ ವಿಧ್ಯಾರ್ಥಿ ಸಂಘ ಶಾಲಾ ಶಿಕ್ಷಕರ ಹಾಗೂ ದಾನಿಗಳ ಸಹಕಾರದಿಂದ ಬೇಕು ಬೇಕಾದ ಸವಲತ್ತುಗಳನ್ನು ಉಚಿತವಾಗಿ ನೀಡಿ ಮಾದರಿಯನ್ನಾಗಿ ರೂಪಿಸಿ, ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ನೋಡಿಕೊಳ್ಳುತ್ತಿದ್ದಾರೆ
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…