ಮುಲ್ಕಿ: ಗ್ರಾಮೀಣ ಪ್ರದೇಶದ ಅತಿಕಾರಿಬೆಟ್ಟು ವಿನ ಪಂಜಿನಡ್ಕ ಕೆಪಿಎಸ್ಕೆ ಸ್ಮಾರಕ ಅನುದಾನಿತ ಪ್ರೌಢಶಾಲೆಯು ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಅಧ್ಯಾಪಕರ ತಂಡ ಅತ್ಯಂತ ಕ್ರೀಯಾಶೀಲವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಿ ಗ್ರಾಮೀಣ ಪ್ರದೇಶದಲ್ಲಿ ಒಂದು ಮಾದರಿ ಶಾಲೆಯಾಗಿ ಹೆಸರು ಗಳಿಸಿದೆ, ಸುಮಾರು ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ಶಾಲಾ ವಿದ್ಯಾರ್ಥಿಗಳಲ್ಲದೆ ಬೇರೆ ಶಾಲೆಯ ವಿದ್ಯಾರ್ಥಿಗಳ ಹಾಗೂ ಮುಂಬೈ ವಿದ್ಯಾರ್ಥಿಗಳು ಸೇರಿ 45 ವಿದ್ಯಾರ್ಥಿಗಳು ಬಾಗವಹಿಸಿದ್ದರು.
ಶಾಲೆಯಲ್ಲಿ ಮುಖ್ಯ ಕಲಾ ಶಿಕ್ಷಕರಾಗಿರುವ ವೆಂಕಿ ಫಲಿಮಾರ್ ರವರು ಶಿಬಿರದಲ್ಲಿ ಮುಖ್ಯವಾಗಿ ಮಕ್ಕಳಿಗೆ ಪೇಪರ್ ಕ್ರಾಪ್ಟ್, ಅವೆ ಮಣ್ಣಿನ ಕಲಾಕೃತಿ ರಚಿಸುವ ಬಗ್ಗೆ ಮಾಹಿತಿ ನೀಡಿದ್ದು ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಶ್ಲೋಕ, ಭಾರತೀಯ ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿ ಹೇಳಲಾಗಿದೆ.
ಕಲಾಕೃತಿಗಳಲ್ಲಿ ಮುಖ್ಯವಾಗಿ ಹಳೆಯ ಬಾಟಲ್ ವಿವಿಧ ಬಣ್ಣಗಳಿಂದ, ಹೂವಿನ ಚಿತ್ರಗಳಿಂದ ಆಕರ್ಷಿಣೀಯವಾದರೆ, ಹಾಳಾದ ತೆಂಗಿನ ಕಾಯಿ ಮತ್ತು ಗೆರಟೆ ಒಂದು ಮನುಷ್ಯನನ್ನು ಹೋಲುವ ರೂಪ ಪಡೆದಿದೆ, ಹಳೆಯ ಪೇಪರ್ ಬುಲೆಟ್ ನ ಪ್ರತಿಕೃತಿ ಹೊಂದಿದರೆ, ಹಳೆಯ ರಟ್ಟು ರಕ್ಕಸನ ರೂಪ ಪಡೆದಿದೆ, ಸ್ಪಂಜ್ ವಿವಿಧ ಗೊಂಬೆಯ ರೂಪ ಪಡೆದು ಆಕರ್ಷಣೀಯ ಅಲ್ಲದೆ ಮಕ್ಕಳಿಗೆ ಶ್ಲೋಕ ಪಾಠ, ಪ್ರಾಣಯಾಮ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಯಿತು.
ಸರಕಾರಿ ಶಾಲೆಗಳೂ ಮುಚ್ಚುತ್ತಾ ಬಂದರೂ ಈ ಅನುದಾನಿತ ಶಾಲೆಯನ್ನು ಶಾಲಾ ಆಡಳಿತ ಮಂಡಳಿ ಹಳೆ ವಿಧ್ಯಾರ್ಥಿ ಸಂಘ ಶಾಲಾ ಶಿಕ್ಷಕರ ಹಾಗೂ ದಾನಿಗಳ ಸಹಕಾರದಿಂದ ಬೇಕು ಬೇಕಾದ ಸವಲತ್ತುಗಳನ್ನು ಉಚಿತವಾಗಿ ನೀಡಿ ಮಾದರಿಯನ್ನಾಗಿ ರೂಪಿಸಿ, ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ನೋಡಿಕೊಳ್ಳುತ್ತಿದ್ದಾರೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…