ಮುಲ್ಕಿ: ಗ್ರಾಮೀಣ ಪ್ರದೇಶದ ಅತಿಕಾರಿಬೆಟ್ಟು ವಿನ ಪಂಜಿನಡ್ಕ ಕೆಪಿಎಸ್ಕೆ ಸ್ಮಾರಕ ಅನುದಾನಿತ ಪ್ರೌಢಶಾಲೆಯು ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಅಧ್ಯಾಪಕರ ತಂಡ ಅತ್ಯಂತ ಕ್ರೀಯಾಶೀಲವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಿ ಗ್ರಾಮೀಣ ಪ್ರದೇಶದಲ್ಲಿ ಒಂದು ಮಾದರಿ ಶಾಲೆಯಾಗಿ ಹೆಸರು ಗಳಿಸಿದೆ, ಸುಮಾರು ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ಶಾಲಾ ವಿದ್ಯಾರ್ಥಿಗಳಲ್ಲದೆ ಬೇರೆ ಶಾಲೆಯ ವಿದ್ಯಾರ್ಥಿಗಳ ಹಾಗೂ ಮುಂಬೈ ವಿದ್ಯಾರ್ಥಿಗಳು ಸೇರಿ 45 ವಿದ್ಯಾರ್ಥಿಗಳು ಬಾಗವಹಿಸಿದ್ದರು.
ಶಾಲೆಯಲ್ಲಿ ಮುಖ್ಯ ಕಲಾ ಶಿಕ್ಷಕರಾಗಿರುವ ವೆಂಕಿ ಫಲಿಮಾರ್ ರವರು ಶಿಬಿರದಲ್ಲಿ ಮುಖ್ಯವಾಗಿ ಮಕ್ಕಳಿಗೆ ಪೇಪರ್ ಕ್ರಾಪ್ಟ್, ಅವೆ ಮಣ್ಣಿನ ಕಲಾಕೃತಿ ರಚಿಸುವ ಬಗ್ಗೆ ಮಾಹಿತಿ ನೀಡಿದ್ದು ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಶ್ಲೋಕ, ಭಾರತೀಯ ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿ ಹೇಳಲಾಗಿದೆ.
ಕಲಾಕೃತಿಗಳಲ್ಲಿ ಮುಖ್ಯವಾಗಿ ಹಳೆಯ ಬಾಟಲ್ ವಿವಿಧ ಬಣ್ಣಗಳಿಂದ, ಹೂವಿನ ಚಿತ್ರಗಳಿಂದ ಆಕರ್ಷಿಣೀಯವಾದರೆ, ಹಾಳಾದ ತೆಂಗಿನ ಕಾಯಿ ಮತ್ತು ಗೆರಟೆ ಒಂದು ಮನುಷ್ಯನನ್ನು ಹೋಲುವ ರೂಪ ಪಡೆದಿದೆ, ಹಳೆಯ ಪೇಪರ್ ಬುಲೆಟ್ ನ ಪ್ರತಿಕೃತಿ ಹೊಂದಿದರೆ, ಹಳೆಯ ರಟ್ಟು ರಕ್ಕಸನ ರೂಪ ಪಡೆದಿದೆ, ಸ್ಪಂಜ್ ವಿವಿಧ ಗೊಂಬೆಯ ರೂಪ ಪಡೆದು ಆಕರ್ಷಣೀಯ ಅಲ್ಲದೆ ಮಕ್ಕಳಿಗೆ ಶ್ಲೋಕ ಪಾಠ, ಪ್ರಾಣಯಾಮ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಯಿತು.
ಸರಕಾರಿ ಶಾಲೆಗಳೂ ಮುಚ್ಚುತ್ತಾ ಬಂದರೂ ಈ ಅನುದಾನಿತ ಶಾಲೆಯನ್ನು ಶಾಲಾ ಆಡಳಿತ ಮಂಡಳಿ ಹಳೆ ವಿಧ್ಯಾರ್ಥಿ ಸಂಘ ಶಾಲಾ ಶಿಕ್ಷಕರ ಹಾಗೂ ದಾನಿಗಳ ಸಹಕಾರದಿಂದ ಬೇಕು ಬೇಕಾದ ಸವಲತ್ತುಗಳನ್ನು ಉಚಿತವಾಗಿ ನೀಡಿ ಮಾದರಿಯನ್ನಾಗಿ ರೂಪಿಸಿ, ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ನೋಡಿಕೊಳ್ಳುತ್ತಿದ್ದಾರೆ
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…