ಬಿಸಿರೋಡಿನಿಂದ ಅಡ್ಡಹೊಳೆವರೆಗೆ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಪಾಣೆಮಂಗಳೂರು ಎಂಬಲ್ಲಿ ಪೇಟೆಗೆ ಜನರ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ.
ಇದರ ಕಾಮಗಾರಿ ನಡೆಯುತ್ತಿದ್ದು ಅಂತಿಮ ಹಂತವನ್ನು ತಲುಪುವ ಮೊದಲೇ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಮೇ.10 ರಾತ್ರಿಯಿಂದ ಅವಕಾಶ ನೀಡಲಾಗಿತ್ತು.
ಮಳೆ ಬರುವ ಮುನ್ನ ಹದಗೆಟ್ಟ ಸರ್ವೀಸ್ ರಸ್ತೆಯನ್ನು ದುರಸ್ತಿ ಮಾಡುವ ಅವಸರದಲ್ಲಿ ಇನ್ನೂ ಪೂರ್ತಿಯಾಗದಿರುವ ಮೇಲ್ಸೆತುವೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಅವಕಾಶ ನೀಡಲಾಗಿತ್ತು.
ಆದರೆ ಗುತ್ತಿಗೆ ವಹಿಸಿಕೊಂಡ ಕಂಪೆನಿಗೆ ಸರ್ವೀಸ್ ರಸ್ತೆಯ ಕಾಮಗಾರಿ ನಡೆಸುವುದು ಅನಿವಾರ್ಯವಾಗಿತ್ತು, ಇದು ನಿಜವಾದರೂ ಇನ್ನೂ ಮೇಲ್ಸೇತುವೆಯ ತಡೆಗೋಡೆ ಕಾಮಗಾರಿ ನಡೆಯದೆ ಇದ್ದುದರಿಂದ ವಾಹನ ಸಂಚಾರ ಮಾಡಿದರೆ ಅಪಾಯವಂತೂ ಕಟ್ಟಿಟ್ಟ ಬುತ್ತಿಯಾಗಿದೆ ಎಂದು ವರದಿ ಬಿತ್ತರಿಸಿದ್ದೇವು.
ಒಂದು ಚೂರು ಜವಬ್ದಾರಿ ಮರೆತು ಡ್ರೈವಿಂಗ್ ಮಾಡಿದರೂ ಆಳೆತ್ತರದ ಗುಂಡಿಗೆ ಬಿದ್ದು ಪ್ರಾಣ ಹಾನಿಯಾಗುವುದಂತು ಗ್ಯಾರಂಟಿ ಎಂದು ಸಾರ್ವಜನಿಕ ವಲಯದಲ್ಲಿ ಹೇಳಲಾಗುತ್ತಿತ್ತು.
ಈ ಬಗ್ಗೆ ಮಾಧ್ಯಮದಲ್ಲಿ ವರದಿ ಬಂದ ಕೂಡಲೇ ಮೇ.11 ರಂದು ಸಂಜೆ ವೇಳೆ ಮೇಲ್ಸೇತುವೆಯಲ್ಲಿ ಸಂಚಾರಕ್ಕೆ ತಡೆಮಾಡಿದ್ದಾರೆ.
ಇದೀಗ ಮತ್ತೆ ಸರ್ವೀಸ್ ರಸ್ತೆಯಲ್ಲಿಯೇ ವಾಹನಗಳು ಓಡಾಟ ನಡೆಸುವುತ್ತಿವೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…