ಮುಲ್ಕಿ: ಇಲ್ಲಿನ ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಬಜಪೆಯ ಅದ್ಯಪಾಡಿಯಿಂದ ಬಂದ ಯುವಕರ ತಂಡ ಮರುವಾಯಿ ಚಿಪ್ಪು ಹೆಕ್ಕಲು ಹೋಗಿ ನೀರುಪಾಲಾದ ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಶ್ (24) ಪತ್ತೆಗಾಗಿ ಎರಡನೇ ದಿನವೂ ತೀವ್ರ ಶೋಧ ಕಾರ್ಯ ನಡೆದರೂ ಯುವಕ ಪತ್ತೆಯಾಗಿಲ್ಲ
ಬೆಳಗ್ಗಿನಿಂದಲೇ ರಾಜ್ಯ ವಿಪತ್ತು ಸ್ಪಂದನಾ ಪಡೆ (ಎಸ್ ಡಿ ಆರ್ ಎಫ್) ಮತ್ತು ಉಡುಪಿಯ ಅಪದ್ಬಾಂಧವ ಈಜುಗಾರರಾದ ಈಶ್ವರ್ ಮಲ್ಪೆ ತಮ್ಮ ತಂಡದೊಂದಿಗೆ ಸಸಿಹಿತ್ಲು ಮುಂಡಾ ಬೀಚ್ ಸಮುದ್ರದ ಅಳಿವೆ ಬಾಗಿಲಿನಲ್ಲಿ ಅನೇಕ ಸಾಹಸ ನಡೆಸಿ ನೀರಿನಲ್ಲಿ ಮುಳುಗಿ ನೀರು ಪಾಲಾದವನನ್ನು ಹುಡುಕಲು ಪ್ರಯತ್ನ ಮಾಡಿದರು ಸಫಲವಾಗಿಲ್ಲ. ಸ್ಥಳದಲ್ಲಿ ಹೆಜ್ಮಾಡಿ ಕಾವಲು ಪಡೆಯ ಸಿಬ್ಬಂದಿ, ಸುರತ್ಕಲ್ ಪೊಲೀಸರು ಹಾಗೂ ಕುತೂಹಲದಿಂದ ಆಗಮಿಸಿದವರು ಬಾರಿ ಸಂಖ್ಯೆಯಲ್ಲಿ ನೆರೆದಿದ್ದರು.
ನೀರು ಪಾಲಾದ ಅಭಿಲಾಶ್ ಮನೆಯವರ ರೋಧನ ಮುಗಿಲು ಮುಟ್ಟಿದ್ದು ಸ್ಥಳದಲ್ಲಿ ಮೌನ ವಾತಾವರಣ ನೆಲೆಸಿದೆ.
ಮಂಗಳೂರು ರೈಲ್ವೇ ಯಲ್ಲಿ ಗುತ್ತಿಗೆದಾರನ ಕೆಲಸ ನಿರ್ವಹಿಸುತ್ತಿದ್ದ ಅಭಿಲಾಶ್ ಉತ್ತಮ ಈಜುಗಾರನಾಗಿದ್ದರೂ ಮಿತ್ರರ ಪ್ರಾಣ ಉಳಿಸಲು ಹೋಗಿ ನೀರು ಪಾಲಾಗಿರುವುದು ದುರದೃಷ್ಟಕರವಾಗಿದೆ ಎಂದು ಸ್ಥಳೀಯರು ಬೇಸರದಿಂದ ಹೇಳುತ್ತಿದ್ದಾರೆ.
ಬಜಪೆ ಸಮೀಪದ ಆದ್ಯಪಾಡಿಯ ಸುಮಾರು ಹತ್ತು ಮಂದಿಯ ಯುವಕರ ತಂಡ ಮರುವಾಯಿ ಚಿಪ್ಪು ಮತ್ತು ಏಡಿ ಹಿಡಿಯಲು ಮುಲ್ಕಿಯ ಕೊಳಚಿ ಕಂಬಳ ಬೀಚ್ ಬಳಿಗೆ ಬಂದಿದ್ದು , ಶಾಂಭವಿ ನದಿಯಲ್ಲಿ ನೀರಿನ ಇಳಿತ ವಿದ್ದ ಕಾರಣ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಸಸಿಹಿತ್ಲು ಮುಂಡಾ ಬೀಚ್ ಅಳಿವೆ ಬಾಗಿಲು ಬಳಿ ನೀರಿನ ಆಳ ಗೊತ್ತಾಗದೆ ಈಜು ಬಾರದ ಧನುಷ್ ಮತ್ತು ಜೀವನ್ ಎಂಬವರು ನೀರಿನಲ್ಲಿ ಮುಳುಗಿದ್ದು ಅವರನ್ನು ರಕ್ಷಿಸಲು ಈಜಲು ಗೊತ್ತಿದ್ದ ಅಭಿಲಾಶ್ ಮುಂದಾಗಿದ್ದು ಅವರನ್ನು ರಕ್ಷಿಸುವ ಯತ್ನದಲ್ಲಿ ಉಳಿದವರ ಕಣ್ಣೆದುರೇ
ನಿರುಪಾಲಾಗಿದ್ದಾನೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…