ಜನ ಮನದ ನಾಡಿ ಮಿಡಿತ

Advertisement

ಮಾನವನ ಬುದ್ಧಿಮತ್ತೆಯನ್ನು ಮೀರಿಸುವ ಸೂಪರ್‌ಇಂಟೆಲಿಜೆಂಟ್ AI ಗೆ ಸಂಬಂಧಿಸಿದ ಸಂಭಾವ್ಯ ಅಪಾಯಗಳ ಬಗ್ಗೆ ನಿಮಗೆ ತಿಳಿದಿದೆಯೇ?

ಸ್ಯಾನ್ ಫ್ರಾನ್ಸಿಸ್ಕೋ : ತನ್ನ ಸೂಪರ್ ಇಂಟೆಲಿಜೆಂಟ್ ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳನ್ನು ನಿಯಂತ್ರಿಸಲು ಮತ್ತು ನಿರ್ವಹಿಸಲು ಉನ್ನತ ಮಷಿನ್​​ ಲರ್ನಿಂಗ್ ಸಂಶೋಧಕರು ಮತ್ತು ಎಂಜಿನಿಯರ್‌ಗಳ ತಂಡವನ್ನು ನಿಯೋಜಿಸುತ್ತಿರುವುದಾಗಿ ಮೈಕ್ರೋಸಾಫ್ಟ್ ಒಡೆತನದ OpenAI ಹೇಳಿದೆ.

ಸೂಪರ್ ಇಂಟೆಲಿಜೆನ್ಸ್ ಪರಿಕಲ್ಪನೆಯು ವಿಭಿನ್ನ ಕೌಶಲ್ಯಗಳ ವ್ಯಾಪಕ ಶ್ರೇಣಿಯಲ್ಲಿ ಉತ್ತಮವಾಗಿರುವ ಒಂದು ಕಾಲ್ಪನಿಕ AI ಮಾಡೆಲ್ ಆಗಿದೆ. ಇದು ಕೆಲ ಹಿಂದಿನ ಪೀಳಿಗೆಯ ಒಂದೇ ಡೊಮೇನ್‌ ಮಾದರಿಗಿಂತ ಭಿನ್ನವಾಗಿವೆ.

ಓಪನ್‌ಎಐನ ಮುಖ್ಯ ವಿಜ್ಞಾನಿ ಮತ್ತು ಕಂಪನಿಯ ಸಹ ಸಂಸ್ಥಾಪಕರಲ್ಲಿ ಒಬ್ಬರಾದ ಇಲ್ಯಾ ಸುಟ್‌ಸ್ಕೇವರ್ ಮತ್ತು ಸಂಶೋಧನಾ ಲ್ಯಾಬ್‌ನ ಅಲೈನ್‌ಮೆಂಟ್ ಮುಖ್ಯಸ್ಥ ಜಾನ್ ಲೈಕ್ ಇವರು ಜಂಟಿಯಾಗಿ ಹೊಸ ತಂಡದ ನೇತೃತ್ವ ವಹಿಸಲಿದ್ದಾರೆ.

“ಸೂಪರ್ ಇಂಟೆಲಿಜೆನ್ಸ್ ಇದು ಮಾನವರು ಆವಿಷ್ಕರಿಸಿದ ಅತ್ಯಂತ ಪ್ರಭಾವಶಾಲಿ ತಂತ್ರಜ್ಞಾನವಾಗಿದೆ ಮತ್ತು ಪ್ರಪಂಚದ ಅನೇಕ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು ನಮಗೆ ಸಹಾಯ ಮಾಡುತ್ತದೆ. ಆದರೆ, ಸೂಪರ್ ಇಂಟೆಲಿಜೆನ್ಸ್‌ನ ಬೃಹತ್ ಶಕ್ತಿಯು ತುಂಬಾ ಅಪಾಯಕಾರಿಯಾಗಿದೆ ಮತ್ತು ಮಾನವೀಯತೆಯ ವಿನಾಶಕ್ಕೆ ಅಥವಾ ಮಾನವರ ಅಳಿವಿಗೆ ಕಾರಣವಾಗಬಹುದು” ಎಂದು ಓಪನ್ ಎಐ ಬುಧವಾರ ಬ್ಲಾಗ್‌ಪೋಸ್ಟ್‌ನಲ್ಲಿ ಹೇಳಿದೆ.

ಕಂಪನಿಯ ಪ್ರಕಾರ, ಇಂಥದೊಂದು ಮಾಡೆಲ್ ಈ ದಶಕದ ಅಂತ್ಯದ ಮೊದಲು ಸಿದ್ಧವಾಗಬಹುದು. ಸೂಪರ್ ಇಂಟೆಲಿಜೆನ್ಸ್ ಜೋಡಣೆಯ ಸಮಸ್ಯೆಯನ್ನು ಪರಿಹರಿಸಲು ಮುಂದಿನ ನಾಲ್ಕು ವರ್ಷಗಳಲ್ಲಿ ತಾನು ಇಲ್ಲಿಯವರೆಗೆ ಪಡೆದುಕೊಂಡಿರುವ ಕಂಪ್ಯೂಟ್‌ನ 20 ಪ್ರತಿಶತವನ್ನು ಸಮರ್ಪಿಸುವುದಾಗಿ ಕಂಪನಿ ಹೇಳಿದೆ.

ಆರ್ಟಿಫಿಶಿಯಲ್ ಸೂಪರ್ ಇಂಟೆಲಿಜೆನ್ಸ್ (ASI) ಎನ್ನುವುದು ಸಾಫ್ಟ್‌ವೇರ್ ಆಧಾರಿತ ವ್ಯವಸ್ಥೆಯಾಗಿದ್ದು, ಇದು ಹಲವಾರು ವಿಚಾರಗಳಲ್ಲಿ ಮಾನವರ ಬೌದ್ಧಿಕ ಶಕ್ತಿಗಳನ್ನು ಮೀರಿಸಲಿದೆ. ASI ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ ಮತ್ತು ಇದೊಂದು ಕಾಲ್ಪನಿಕ ಸ್ಥಿತಿಯಾಗಿದೆ. ಎಎಸ್​ಐ ಸಾಮಾನ್ಯ ಕೃತಕ ಬುದ್ಧಿಮತ್ತೆ (AI) ಗಿಂತ ಭಿನ್ನವಾಗಿದೆ. ಇದು ಮಾನವ ಬೌದ್ಧಿಕ ಸಾಮರ್ಥ್ಯಗಳ ಸಾಫ್ಟ್‌ವೇರ್ ಆಧಾರಿತ ಸಿಮ್ಯುಲೇಶನ್ ಅನ್ನು ಒಳಗೊಂಡಿರುತ್ತದೆ. ಉದಾಹರಣೆಗೆ- ಮಾಹಿತಿಯ ಸ್ವಾಧೀನದ ಮೂಲಕ ಕಲಿಕೆ, ತಾರ್ಕಿಕತೆ ಮತ್ತು ಸ್ವಯಂ-ತಿದ್ದುಪಡಿಗಳು ಇದರ ವಿಶೇಷತೆಗಳಾಗಿರುತ್ತವೆ.

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!