ದಿನಾಂಕ 12/5/24 ರಂದು ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ದೇವರ ಪ್ರತಿಷ್ಠಾಪನ ಮಹೋತ್ಸವದ ದಿನ ‘ತೋಕೂರುದ ಪುರ್ಸದ’ ತುಳು ಭಕ್ತಿಗೀತೆಯು, ಡಮರುಗ ಸೌಂಡ್ಸ್ ಯೂಟೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಯಿತು.
ಶ್ರೀಮತಿ ಯಶೋಧ ಆರ್ ಸುವರ್ಣ ಮತ್ತು ಹರಿಪ್ರಸಾದ್ ಪೂಜಾರಿಯವರ ನಿರ್ಮಾಣದಲ್ಲಿ, ತುಳುನಾಡ ಕಲಶ ಜಿ.ಎಸ್.ಗುರುಪುರ ಸಾಹಿತ್ಯ, ಚೈತ್ರ.ಜಿ ಕಲ್ಲಡ್ಕ ರವರ ಧ್ವನಿಯಲ್ಲಿ, ಡಿ.ಎಸ್.ಪ್ರೋಡಕ್ಷನ್ ಕಿನ್ನಿಗೋಳಿರವರ ಚಿತ್ರೀಕರಣದ, ‘ತೋಕೂರುದ ಪುರ್ಸದ’ ತುಳು ಭಕ್ತಿ ಗೀತೆಯನ್ನು ದೇವಸ್ಥಾನದ ತಂತ್ರಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿ, ಪ್ರಧಾನ ಅರ್ಚಕ ಮಧುಸೂದನ ಆಚಾರ್ಯ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ದೀಲಿಪ್ ರೊಡ್ಕರ್, ಯಶೋಧ ಆರ್ ಸುವರ್ಣ, ಗುರುರಾಜ್ ಎಸ್ ಪೂಜಾರಿ, ಹರಿಪ್ರಸಾದ್ ಜಿ ಶೆಟ್ಟಿ, ಹರಿದಾಸ್ ಭಟ್, ರಾಮಣ್ಣ ದೇವಾಡಿಗ, ಪುರುಷೋತ್ತಮ ಕೋಟ್ಯಾನ್, ಸವಿತಾ ಬೆಳ್ಳಾಯರು, ವಿಪುಲ ಶೆಟ್ಟಿಗಾರ್, ಪುರುಷೋತ್ತಮ ರಾವ್, SSMG ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷ ಜಗದೀಶ ಕುಲಾಲ್, ಪ್ರಧಾನ ಕಾರ್ಯದರ್ಶಿ ದೀಪಕ್ ಸುವರ್ಣ, ಪ್ರಶಾಂತ್ ಕುಮಾರ್ ಬೇಕಲ್, ಮನೋಜ್ ಕುಮಾರ್, ಶಿವ ದೇವಾಡಿಗ, ಪದ್ಮನಾಭ ಶೆಟ್ಟಿ,ಸಂಪತ್ ದೇವಾಡಿಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…