ದಿನಾಂಕ 12/5/24 ರಂದು ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ದೇವರ ಪ್ರತಿಷ್ಠಾಪನ ಮಹೋತ್ಸವದ ದಿನ ‘ತೋಕೂರುದ ಪುರ್ಸದ’ ತುಳು ಭಕ್ತಿಗೀತೆಯು, ಡಮರುಗ ಸೌಂಡ್ಸ್ ಯೂಟೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಯಿತು.
ಶ್ರೀಮತಿ ಯಶೋಧ ಆರ್ ಸುವರ್ಣ ಮತ್ತು ಹರಿಪ್ರಸಾದ್ ಪೂಜಾರಿಯವರ ನಿರ್ಮಾಣದಲ್ಲಿ, ತುಳುನಾಡ ಕಲಶ ಜಿ.ಎಸ್.ಗುರುಪುರ ಸಾಹಿತ್ಯ, ಚೈತ್ರ.ಜಿ ಕಲ್ಲಡ್ಕ ರವರ ಧ್ವನಿಯಲ್ಲಿ, ಡಿ.ಎಸ್.ಪ್ರೋಡಕ್ಷನ್ ಕಿನ್ನಿಗೋಳಿರವರ ಚಿತ್ರೀಕರಣದ, ‘ತೋಕೂರುದ ಪುರ್ಸದ’ ತುಳು ಭಕ್ತಿ ಗೀತೆಯನ್ನು ದೇವಸ್ಥಾನದ ತಂತ್ರಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿ, ಪ್ರಧಾನ ಅರ್ಚಕ ಮಧುಸೂದನ ಆಚಾರ್ಯ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ದೀಲಿಪ್ ರೊಡ್ಕರ್, ಯಶೋಧ ಆರ್ ಸುವರ್ಣ, ಗುರುರಾಜ್ ಎಸ್ ಪೂಜಾರಿ, ಹರಿಪ್ರಸಾದ್ ಜಿ ಶೆಟ್ಟಿ, ಹರಿದಾಸ್ ಭಟ್, ರಾಮಣ್ಣ ದೇವಾಡಿಗ, ಪುರುಷೋತ್ತಮ ಕೋಟ್ಯಾನ್, ಸವಿತಾ ಬೆಳ್ಳಾಯರು, ವಿಪುಲ ಶೆಟ್ಟಿಗಾರ್, ಪುರುಷೋತ್ತಮ ರಾವ್, SSMG ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷ ಜಗದೀಶ ಕುಲಾಲ್, ಪ್ರಧಾನ ಕಾರ್ಯದರ್ಶಿ ದೀಪಕ್ ಸುವರ್ಣ, ಪ್ರಶಾಂತ್ ಕುಮಾರ್ ಬೇಕಲ್, ಮನೋಜ್ ಕುಮಾರ್, ಶಿವ ದೇವಾಡಿಗ, ಪದ್ಮನಾಭ ಶೆಟ್ಟಿ,ಸಂಪತ್ ದೇವಾಡಿಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…