ದಿನಾಂಕ 12/5/24 ರಂದು ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ದೇವರ ಪ್ರತಿಷ್ಠಾಪನ ಮಹೋತ್ಸವದ ದಿನ ‘ತೋಕೂರುದ ಪುರ್ಸದ’ ತುಳು ಭಕ್ತಿಗೀತೆಯು, ಡಮರುಗ ಸೌಂಡ್ಸ್ ಯೂಟೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಯಿತು.
ಶ್ರೀಮತಿ ಯಶೋಧ ಆರ್ ಸುವರ್ಣ ಮತ್ತು ಹರಿಪ್ರಸಾದ್ ಪೂಜಾರಿಯವರ ನಿರ್ಮಾಣದಲ್ಲಿ, ತುಳುನಾಡ ಕಲಶ ಜಿ.ಎಸ್.ಗುರುಪುರ ಸಾಹಿತ್ಯ, ಚೈತ್ರ.ಜಿ ಕಲ್ಲಡ್ಕ ರವರ ಧ್ವನಿಯಲ್ಲಿ, ಡಿ.ಎಸ್.ಪ್ರೋಡಕ್ಷನ್ ಕಿನ್ನಿಗೋಳಿರವರ ಚಿತ್ರೀಕರಣದ, ‘ತೋಕೂರುದ ಪುರ್ಸದ’ ತುಳು ಭಕ್ತಿ ಗೀತೆಯನ್ನು ದೇವಸ್ಥಾನದ ತಂತ್ರಿ ವೇದಮೂರ್ತಿ ಶ್ರೀ ಗೋಪಾಲಕೃಷ್ಣ ತಂತ್ರಿ, ಪ್ರಧಾನ ಅರ್ಚಕ ಮಧುಸೂದನ ಆಚಾರ್ಯ ಬಿಡುಗಡೆಗೊಳಿಸಿದರು, ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ದೀಲಿಪ್ ರೊಡ್ಕರ್, ಯಶೋಧ ಆರ್ ಸುವರ್ಣ, ಗುರುರಾಜ್ ಎಸ್ ಪೂಜಾರಿ, ಹರಿಪ್ರಸಾದ್ ಜಿ ಶೆಟ್ಟಿ, ಹರಿದಾಸ್ ಭಟ್, ರಾಮಣ್ಣ ದೇವಾಡಿಗ, ಪುರುಷೋತ್ತಮ ಕೋಟ್ಯಾನ್, ಸವಿತಾ ಬೆಳ್ಳಾಯರು, ವಿಪುಲ ಶೆಟ್ಟಿಗಾರ್, ಪುರುಷೋತ್ತಮ ರಾವ್, SSMG ಸ್ಪೋರ್ಟ್ಸ್ ಕ್ಲಬ್ಬಿನ ಅಧ್ಯಕ್ಷ ಜಗದೀಶ ಕುಲಾಲ್, ಪ್ರಧಾನ ಕಾರ್ಯದರ್ಶಿ ದೀಪಕ್ ಸುವರ್ಣ, ಪ್ರಶಾಂತ್ ಕುಮಾರ್ ಬೇಕಲ್, ಮನೋಜ್ ಕುಮಾರ್, ಶಿವ ದೇವಾಡಿಗ, ಪದ್ಮನಾಭ ಶೆಟ್ಟಿ,ಸಂಪತ್ ದೇವಾಡಿಗ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…