ಇತರೆ

ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಸಾವಿನ ತನಿಖೆಗೆ ಆಗ್ರಹಿಸಿ ತಿಂಗಳು ಕಳೆದರೂ ಕಾಣದ ಬೆಳವಣಿಗೆ : ಮತ್ತೆ ಎಸ್ಪಿ ಭೇಟಿಯಾದ ರಮಾನಾಥ ರೈ ನಿಯೋಗ

ಬಂಟ್ವಾಳ, ಮೇ, 2024 : ಸಾಮಾಜಿಕ ಹೋರಾಟಗಾರ ಹಾಗೂ ಆರ್ ಟಿ ಐ ಕಾರ್ಯಕರ್ತ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷನಾಗಿ ಸಕ್ರಿಯವಾಗಿದ್ದ ಅವಿವಾಹಿತ ಯುವಕ, ವಾಮಪದವು ಸಮೀಪದ ಚೆನ್ನೈತ್ತೋಡಿ ಗ್ರಾಮದ ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ್ ಅವರ ಸಂಶಯಾಸ್ಪದ ಸಾವಿನ ತನಿಖೆ ಬಗ್ಗೆ ಮಾಹಿತಿ ಪಡೆಯಲು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರ ನೇತೃತ್ವದ ನಿಯೋಗ ಜಿಲ್ಲಾ ಎಸ್ಪಿ ಕಚೇರಿಗೆ ಭೇಟಿ ನೀಡಿ ಸೂಕ್ತ ತನಿಖೆ ನಡೆಸಿ ಸಾವಿನ ಸತ್ಯಾಸತ್ಯತೆ ಹೊರಗೆಳೆಯಬೇಕೆಂದು ಆಗ್ರಹಿಸಿದೆ.

ಕಳೆದ ಮಾರ್ಚ್ 31 ರಂದು ಪದ್ಮನಾಭ ಅವರ ಮೃತದೇಹ ಅವರ ಮನೆ ಬಳಿ ಗುಡ್ಡದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಸಾವಿನಲ್ಲಿ ಸಂಶಯಗಳಿದ್ದು, ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮುಖಂಡರ ನಿಯೋಗ ಈ ಹಿಂದೆ ಅಂದರೆ ಎಪ್ರಿಲ್ 2 ರಂದು ಜಿಲ್ಲಾ ಎಸ್ಪಿ ರಿಷ್ಯಂತ್ ಸಿ ಬಿ ಅವರನ್ನು ಭೇಟಿ ಮಾಡಿತ್ತು. ಈ ಸಂದರ್ಭ ವಿಶೇಷ ತನಿಖಾ ತಂಡ ರಚಿಸಿ ಈ ಬಗ್ಗೆ ತನಿಖೆ ನಡೆಸುವ ಬಗ್ಗೆ ಎಸ್ಪಿ ನಾಯಕರಿಗೆ ಭರವಸೆ ನೀಡಿದ್ದರು. ಮನವಿ ನೀಡಿ ತಿಂಗಳು ಕಳೆದರೂ ಯಾವುದೇ ಬೆಳವಣಿಗೆ ಕಂಡು ಬರದ ಹಿನ್ನಲೆಯಲ್ಲಿ ಇದೀಗ ಮತ್ತೆ ರಮಾನಾಥ ರೈ ನೇತೃತ್ವದ ಕಾಂಗ್ರೆಸ್ ನಿಯೋಗ ಎಸ್ಪಿ ಭೇಟಿ ನೀಡಿ ತನಿಖೆಗೆ ಆಗ್ರಹಿಸಿದೆ.
ಬಂಟ್ವಾಳ ಅಕ್ರಮ ಸಕ್ರಮ ಸಮಿತಿ 2019 ರಿಂದ 2023 ರವರೆಗಿನ ನಡೆಸಿದಂತಹ ಅಕ್ರಮ-ಸಕ್ರಮ ಭೂಮಂಜೂರಾತಿಗೆ ಸಂಬಂಧಪಟ್ಟಂತೆ ಸಮಿತಿಯು ನಡೆಸಿದಂತಹ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಿ ದೂರು ದಾಖಲಿಸಿದ್ದರು. ಬಂಟ್ವಾಳ ಕ್ಷೇತ್ರದ ಶಾಸಕರ ಹಿಂಬಾಲಕರೊಬ್ಬರು ಬಂಟ್ವಾಳ ಬೈಪಾಸ್‍ನಲ್ಲಿ ನಿರ್ಮಿಸಿದ ಅನಧಿಕೃತ ಕಟ್ಟಡದ ವಿರುದ್ದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿಯವರ ವಿರುದ್ದ ಕ್ರಮಕೈಗೊಳ್ಳುವಂತೆ ದೂರು ನೀಡುವಲ್ಲಿ ಕೂಡ ಪ್ರಮುಖ ಪಾತ್ರ ವಹಿಸಿದ್ದರು. ಬಂಟ್ವಾಳ ಕ್ಷೇತ್ರದ ಹಲವಾರು ಕಡೆಗಳಲ್ಲಿ ಕಳಪೆ ರಸ್ತೆ ಡಾಮಾರೀಕರಣ, ಕಾಂಕ್ರೀಟಿಕರಣ ಬಗ್ಗೆ ಸಾರ್ವಜನಿಕರ ಪರವಾಗಿ ಧ್ವನಿ ಎತ್ತಿ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ದೂರನ್ನು ಸಲ್ಲಿಸಿದ್ದರು. ಸಿದ್ದಕಟ್ಟೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರ ಬ್ಯಾಂಕ್ ಅವ್ಯವಹಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಪ್ರಶ್ನೆಯನ್ನು ಮಾಡಿದ್ದರು. ಹೀಗೆ ತಾಲೂಕಿನಾದ್ಯಂತ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳ ಬಗ್ಗೆ ಪ್ರಶ್ನೆಯನ್ನು ಮಾಡುತ್ತಾ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದರು.
ಹೀಗಿರುವಲ್ಲಿ ಪದ್ಮನಾಭ ಸಾಮಂತ್ ಒಬ್ಬ ಧೃಡ ಮನಸ್ಸಿನ ವ್ಯಕ್ತಿಯಾಗಿದ್ದು, ಯಾವುದೇ ರೀತಿಯಲ್ಲಿ ಆತ್ಮಹತ್ಯೆ ಮಾಡತಕ್ಕಂತಹ ದುರ್ಬಲ ಮನಸ್ಸಿನ ವ್ಯಕ್ತಿಯಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ವಿಚಾರವಾಗಿರುತ್ತದೆ. ಆದರೆ ಅವರ ಸಾವಿನ ರೀತಿ ಮತ್ತು ಮೃತದೇಹ ಇದ್ದಂತಹ ಸ್ಥಿತಿಗತಿ ಅವರ ಸಾವಿನ ಬಗ್ಗೆ ಸಂಶಯವನ್ನು ವ್ಯಕ್ತಪಡಿಸುತ್ತಾ ಇದೆ. ಅವರು ಕೆಲವೊಂದು ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ದ ಮತ್ತು ಅವರ ಅಕ್ರಮಗಳ ವಿರುದ್ದ ಯಾವುದೇ ಮುಲಾಜಿಲ್ಲದೆ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸುತ್ತಾ ಇದ್ದರು. ಆ ಕಾರಣಕ್ಕಾಗಿ ಪದ್ಮನಾಭ ಸಾಮಂತ್ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಾಬ್ತು ಪೆÇೀಲಿಸ್ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸಿ ಸೂಕ್ತ ರಕ್ಷಣೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು.
ಆದುದರಿಂದ ಈ ಎಲ್ಲಾ ಸನ್ನಿವೇಶಗಳು ಪದ್ಮನಾಭ ಸಾಮಂತ್ ಅವರ ಸಾವಿನ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದು, ರಾಜಕೀಯ ವಲಯದಲ್ಲಿ ಕೂಡ ಅವರ ಮೇಲೆ ವೈಯಕ್ತಿಕ ದ್ವೇಷವನ್ನು ಹೊಂದಿದ್ದ ವ್ಯಕ್ತಿಗಳು ಅವರ ಸಾವಿನ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ, ಅಪಮಾನಕಾರಕವಾಗಿ, ನಿಂದನಕಾರಿಯಾಗಿ ಮತ್ತು ಅಪಹಾಸ್ಯದ ಸುದ್ದಿಗಳನ್ನು ಪದ್ಮನಾಭ ಸಾಮಂತ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ್ದರು. ಈ ಎಲ್ಲಾ ವ್ಯಕ್ತಿಗಳ ಬಗ್ಗೆ ಸೂಕ್ತ ರೀತಿಯ ತನಿಖೆಯ ಅಗತ್ಯವಿರುತ್ತದೆ ಎಂದು ನಿಯೋಗ ಎಸ್ಪಿಗೆ ಮನವಿ ಮಾಡಿಕೊಂಡಿತ್ತು.
ಆದುದರಿಂದ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಪದ್ಮನಾಭ ಸಾಮಂತ್ ಅವರ ಸಾವು ಹೇಗೆ ಸಂಭವಿಸಿತೆಂದು ಹಾಗೂ ಅದರ ಹಿಂದಿನ ಕಾರಣವನ್ನು ಕಂಡು ಹಿಡಿಯಲು ಸೂಕ್ತ ತನಿಖೆಯನ್ನು ಕೈಗೊಳ್ಳಬೇಕು, ಈ ಕಾರಣಕ್ಕಾಗಿ ಪ್ರತ್ಯೇಕ ವಿಶೇಷ ಪೊಲೀಸ್ ತಂಡವನ್ನು ರಚಿಸಿ ತನಿಖೆ ಮಾಡಬೇಕು ಎಂದು ನಿಯೋಗ ಆಗ್ರಹಿಸಿತ್ತು.
ಒಂದಾನುವೇಳೆ ಆತ್ಮಹತ್ಯೆಯ ಸಂದರ್ಭಗಳೇನಾದರೂ ತನಿಖೆಯಲ್ಲಿ ಕಂಡು ಬಂದಲ್ಲಿ, ಇದಕ್ಕೆ ಪ್ರಚೋದನೆಗೈದು ಘಟನೆಗೆ ಕಾರಣರಾದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ದ ಕೂಡಲೇ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆಯೂ ಕಾಂಗ್ರೆಸ್ ನಿಯೋಗ ಜಿಲ್ಲಾ ಎಸ್ಪಿ ಅವರನ್ನು ಒತ್ತಾಯಿಸಿತ್ತು.
ನಿಯೋಗದಲ್ಲಿ ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಎಂ ಎಸ್ ಮೊಹಮ್ಮದ್,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಬಿ ಎಂ ಅಬ್ಬಾಸ್ ಅಲಿ, ಕೆ ಮಾಯಿಲಪ್ಪ ಸಾಲ್ಯಾನ್, ಪ್ರಮುಖರಾದ ಬಿ ಪದ್ಮಶೇಖರ ಜೈನ್, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಜಗದೀಶ್ ಕೊಯಿಲ,ಬಿ ಆರ್ ಅಂಚನ್,ಸುರೇಶ್ ವಕೀಲರು,ಆದಂ ಕುಂಞ, ದೇವಪ್ಪ ಕುಲಾಲ್ ಕರ್ಪೆ,ಸುಧಾಕರ್ ಶಣೈ ಬಡಕಜೆಕಾರು,ಸದಾನಂದ ಶೆಟ್ಟಿ ಪ್ರವೀಣ್ ರೊಡ್ರಿಗಸ್ ಮೊದಲಾದವರು ಇದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

4 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

4 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

6 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

1 day ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

1 day ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

1 day ago